ಆ ಮಾತನ್ನು ನಾವು ಹೇಳಿದ್ರೆ ಟ್ರೋಲ್ ಆಗ್ತೀವಿ ಎಂದ ಕಿಚ್ಚ ಸುದೀಪ್

| Updated By: ರಾಜೇಶ್ ದುಗ್ಗುಮನೆ

Updated on: Apr 22, 2022 | 6:00 AM

ಸುದೀಪ್ ಅವರು ಬಿಡುವು ಮಾಡಿಕೊಂಡು ‘ತೋತಾಪುರಿ’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಅವರು ಕೆಲವು ಮಾತುಗಳನ್ನು ಹೇಳಿದ್ದಾರೆ. ಈ ಚಿತ್ರದ ಟ್ರೇಲರ್​ನಲ್ಲಿ ಡಬಲ್​ ಮೀನಿಂಗ್ ಬರುವ ಹಲವು ಡೈಲಾಗ್​ಗಳಿವೆ. ಈ ಡೈಲಾಗ್​ಗೆ ಜನರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ

ಕಿಚ್ಚ ಸುದೀಪ್ ಅವರು (Kichcha Sudeep) ಚಿತ್ರರಂಗದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಸದ್ಯ ಅವರ ಸಂಪೂರ್ಣ ಗಮನ ‘ವಿಕ್ರಾಂತ್​ ರೋಣ’ ಚಿತ್ರದ (Vikrant Rona) ಮೇಲಿದೆ. ಜುಲೈ ತಿಂಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದ್ದು, ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲು ಸಿದ್ಧತೆ ನಡೆದಿದೆ. ಈ ಕೆಲಸಗಳ ಮಧ್ಯೆ ಸುದೀಪ್ ಅವರು ಬಿಡುವು ಮಾಡಿಕೊಂಡು ‘ತೋತಾಪುರಿ’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಅವರು ಕೆಲವು ಮಾತುಗಳನ್ನು ಹೇಳಿದ್ದಾರೆ. ಈ ಚಿತ್ರದ ಟ್ರೇಲರ್​ನಲ್ಲಿ ಡಬಲ್​ ಮೀನಿಂಗ್ ಬರುವ ಹಲವು ಡೈಲಾಗ್​ಗಳಿವೆ. ಈ ಡೈಲಾಗ್​ಗೆ ಜನರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ. ‘ಈ ರೀತಿಯ ಡೈಲಾಗ್​ಗಳನ್ನು ಜಗ್ಗೇಶ್ (Jaggesh)​ ಹೇಳಿದರೆ ಜನರು ನಗುತ್ತಾರೆ. ಆದರೆ, ನಾವು ಈ ಡೈಲಾಗ್​ ಹೇಳಿದರೆ ಜನರು ಟ್ರೋಲ್ ಮಾಡುತ್ತಾರೆ. ಇದು ಏಕೆ ಎಂಬುದು ಇನ್ನೂ ಗೊತ್ತಾಗಿಲ್ಲ’ ಎಂದರು ಸುದೀಪ್.

ಇದನ್ನೂ ಓದಿ: ‘ನವರಸ ನಾಯಕ ಆಗಿದ್ರೆ ಮಾತ್ರ ಹೀಗೆ ನಟಿಸೋಕೆ ಸಾಧ್ಯ’; ಸುದೀಪ್​ ನಟನೆ ಬಗ್ಗೆ ಜಗ್ಗೇಶ್​ ಹೊಗಳಿಕೆ

‘ನಾನು ಸಿನಿಮಾಗೆ ಬೆಂಬಲ ನೀಡಿಲ್ಲ ಅಂದ್ರೂ ಸುದ್ದಿಯಲ್ಲಿ ಇರ್ತೀನಿ’; ಸುದೀಪ್ ಹೀಗೆ ಹೇಳಿದ್ದು ಏಕೆ?

Follow us on