ರಾಜಕೀಯದ ಎಂಟ್ರಿ ಪ್ಲ್ಯಾನ್ ಬಗ್ಗೆ ಮೌನ ಮುರಿದ ನಟ ಕಿಚ್ಚ ಸುದೀಪ್

Updated on: Sep 01, 2025 | 3:23 PM

‘ಸದ್ಯಕ್ಕೆ ಕಲಾವಿದನಾಗಿ ಇಷ್ಟು ಮಾಡಬಲ್ಲೆ. ರಾಜಕೀಯಕ್ಕೆ ಎಂಟ್ರಿ ಆದಾಗ ಬೇರೆ ಎಲ್ಲವನ್ನೂ ಮಾಡೋಣ’ ಎಂದು ಸುದೀಪ್ ಹೇಳಿದರು. ಹಾಗಾದ್ರೆ ರಾಜಕೀಯಕ್ಕೆ ಬರುವುದು ಯಾವಾಗ ಎಂದು ಕೇಳಿದ್ದಕ್ಕೆ, ‘ಗೊತ್ತಿಲ್ಲ, ಸದ್ಯಕ್ಕೆ ಯೋಚನೆ ಇಲ್ಲ. ಆದರೆ ಆಗಾಗ ಆ ಯೋಚನೆ ಬರುವ ಹಾಗೆ ಮಾಡುತ್ತಿರುತ್ತಾರೆ ಕೆಲವರು’ ಎಂದಿದ್ದಾರೆ ಸುದೀಪ್.

ನಟ ಕಿಚ್ಚ ಸುದೀಪ್ (Kichcha Sudeep) ಅವರು ಯಾವಾಗ ರಾಜಕೀಯಕ್ಕೆ ಬರುತ್ತಾರೆ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಇದೆ. ಈ ಬಗ್ಗೆ ಅವರು ಉತ್ತರ ನೀಡಿದ್ದಾರೆ. ಹುಟ್ಟುಹಬ್ಬದ (Sudeep Birthday) ಪ್ರಯುಕ್ತ ಸುದೀಪ್ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ರಾಜಕೀಯದ ಬಗ್ಗೆ ಅವರು ಮಾತನಾಡಿದರು. ‘ಅಮ್ಮನ ಹೆಜ್ಜೆ ಹಸಿರು ಹೆಜ್ಜೆ’ ಎಂದು ಸುದೀಪ್ ಅವರು ಪರಿಸರ ಉಳಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ. ‘ಕಲಾವಿದನಾಗಿ ಸದ್ಯಕ್ಕೆ ಇಷ್ಟು ಮಾಡಬಲ್ಲೆ. ರಾಜಕೀಯಕ್ಕೆ ಎಂಟ್ರಿ ಆದಾಗ ಬೇರೆ ಎಲ್ಲ ಮಾಡೋಣ’ ಎಂದು ಸುದೀಪ್ ಹೇಳಿದರು. ಹಾಗಾದರೆ ರಾಜಕೀಯಕ್ಕೆ ಬರೋದು ಯಾವಾಗ ಎಂದು ಕೇಳಿದ್ದಕ್ಕೆ, ‘ಗೊತ್ತಿಲ್ಲ.. ಸದ್ಯಕ್ಕೆ ಆ ಯೋಚನೆ ಇಲ್ಲ. ಆದರೆ ಆಗಾಗ ಯೋಚನೆ ಬರುವ ಹಾಗೆ ಮಾಡುತ್ತಿರುತ್ತಾರೆ ಕೆಲವರು’ ಎಂದಿದ್ದಾರೆ ಸುದೀಪ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More