ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್

Updated on: Dec 13, 2025 | 1:31 PM

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಈ ವಾರ ಸಾಕಷ್ಟು ಬೆಳವಣಿಗೆ ನಡೆದಿದೆ. ಈ ವಿಷಯ ಸಾಕಷ್ಟು ಗಮನ ಸೆಳೆದಿದೆ. ಈ ವಾರ ಚೈತ್ರಾ ಅವರು ಉಸ್ತುವಾರಿ ಆಗಿದ್ದರು. ಅವರು ಉಸ್ತುವಾರಿ ಮಾಡುವಾಗ ಸಾಕಷ್ಟು ತಪ್ಪುಗಳು ನಡೆದಿದ್ದವು. ಅದರ ಪಂಚಾಯ್ತಿಗೆ ಸುದೀಪ್ ಬಂದಿದ್ದಾರೆ.

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಈ ವಾರ ಸಾಕಷ್ಟು ಬೆಳವಣಿಗೆ ನಡೆದವು. ಚೈತ್ರಾ ಕುಂದಾಪುರ ಅವರ ಉಸ್ತುವಾರಿ ಚರ್ಚೆಗೆ ಕಾರಣ ಆಯಿತು. ಈ ವಾರ ಸುದೀಪ್ ಅವರು ಇದರ ಪಂಚಾಯ್ತಿ ಮಾಡಲಿದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ತಪ್ಪು ಯಾರದ್ದು, ಸರಿ ಯಾರದ್ದು ಎಂಬುದು ನಿರ್ಧರಿಸೋದು ಈ ವಾರದ ಪಂಚಾಯ್ತಿಯ ಹೈಲೈಟ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 13, 2025 01:28 PM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More