ರಾಯರ ಸನ್ನಿಧಿಯಲ್ಲಿ ನಟ ‘ಕಿಚ್ಚ’ ಸುದೀಪ್​; ಇಲ್ಲಿದೆ ವಿಡಿಯೋ

ಸುದೀಪ್ ಬಂದಿರುವ ವಿಚಾರ ತಿಳಿಯುತ್ತಿದ್ದಂತೆ ದೇವಸ್ಥಾನಕ್ಕೆ ಅವರ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಇವರನ್ನು ನಿಯಂತ್ರಿಸೋಕೆ ಪೊಲೀಸರು ಹರಸಾಹಸ ಪಡೆಯಬೇಕಾಯಿತು.

ರಾಯರ ಸನ್ನಿಧಿಯಲ್ಲಿ ನಟ ‘ಕಿಚ್ಚ’ ಸುದೀಪ್​; ಇಲ್ಲಿದೆ ವಿಡಿಯೋ
| Updated By: ರಾಜೇಶ್ ದುಗ್ಗುಮನೆ

Updated on: Mar 04, 2022 | 9:43 PM

ನಟ ಸುದೀಪ್​ (Kichcha Sudeep) ಅವರು ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಮಂತ್ರಾಲಯದಲ್ಲಿ ಗುರುವೈಭವೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಅಲ್ಲಿಗೆ ತೆರಳಿದ್ದಾರೆ. ಸುದೀಪ್​ ಅವರು ದೇವಸ್ಥಾನಕ್ಕೆ ತೆರಳಿ ರಾಯರ ಬೃಂದಾವನ ದರ್ಶನ ಪಡೆದಿದ್ದಾರೆ. ಚಿತ್ರರಂಗದಲ್ಲಿ‌ ಸುದೀಪ್​ 26 ವರ್ಷ ಪೂರೈಸಿದ್ದಾರೆ. ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಅವರ ಸಾಧನೆಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಸುದೀಪ್​​ಗೆ ಸನ್ಮಾನ ಮಾಡಲಾಗಿದೆ. ಪೀಠಾಧಿಪತಿ ಸುಭುದೇಂದ್ರ ತೀರ್ಥರಿಂದ ಸುದೀಪ್​ಗೆ ಸನ್ಮಾನ ಮಾಡಲಾಯಿತು. ಸುದೀಪ್ ಬಂದಿರುವ ವಿಚಾರ ತಿಳಿಯುತ್ತಿದ್ದಂತೆ ದೇವಸ್ಥಾನಕ್ಕೆ ಅವರ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಇವರನ್ನು ನಿಯಂತ್ರಿಸೋಕೆ ಪೊಲೀಸರು ಹರಸಾಹಸ ಪಡೆಯಬೇಕಾಯಿತು. ‘ವಿಕ್ರಾಂತ್​ ರೋಣ’ ಸಿನಿಮಾ (Vikrant Rona Movie) ಕೊನೆಯ ಹಂತದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಸುದೀಪ್​ ಇಂಗ್ಲಿಷ್ ವರ್ಷನ್​ ಡಬ್ಬಿಂಗ್ ಪೂರ್ಣಗೊಳಿಸಿದ್ದರು.

ಇದನ್ನೂ ಓದಿ: 26 Years Of Sudeepism: ‘ಸುದೀಪ್ ಚಿತ್ರರಂಗದ ಪಯಣಕ್ಕೆ 26 ವರ್ಷ’; ಪತ್ನಿ ಪ್ರಿಯಾಗೆ ಧನ್ಯವಾದ ಹೇಳಿದ ಕಿಚ್ಚ

‘ಯಾಕ್ರಿ ನಿಮಗೆ ಇಷ್ಟು ಗಾಂಚಲಿ ಅಂತ ಕೇಳ್ತಾರೆ, ಎಲ್ಲವೂ ಇವರಿಂದಾನೆ’: ವೇದಿಕೆಯಲ್ಲಿ ಸುದೀಪ್​ ಓಪನ್​ ಮಾತು

Follow us