ಚಾಮುಂಡೇಶ್ವರಿ ದರ್ಶನ ಪಡೆದ ಸುದೀಪ್​; ಕಿಚ್ಚನ ನೋಡಲು ಮುಗಿಬಿದ್ದ ಅಭಿಮಾನಿಗಳು

ಚಾಮುಂಡೇಶ್ವರಿ ದರ್ಶನ ಪಡೆದ ಸುದೀಪ್​; ಕಿಚ್ಚನ ನೋಡಲು ಮುಗಿಬಿದ್ದ ಅಭಿಮಾನಿಗಳು
|

Updated on: May 27, 2024 | 8:01 PM

‘ಮ್ಯಾಕ್ಸ್​’ ಸಿನಿಮಾದ ಶೂಟಿಂಗ್​ ಮುಗಿಸಿರುವ ನಟ ಕಿಚ್ಚ ಸುದೀಪ್ ಅವರು ಕರ್ನಾಟಕಕ್ಕೆ ಮರಳಿದ್ದಾರೆ. ಈಗ ಅವರು ಮೈಸೂರಿಗೆ ಭೇಟಿ ನೀಡಿದ್ದು, ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬಂದು ದರ್ಶನ ಪಡೆದಿದ್ದಾರೆ. ಸುದೀಪ್​ ಅವರ ಅಭಿಮಾನಿಗಳು ದೇವಸ್ಥಾನದ ಆವರಣದಲ್ಲಿ ಜಮಾಯಿಸಿದ್ದಾರೆ. ಸುದೀಪ್​ಗೆ ಜೈಕಾರ ಕೂಗಿ ಜನರು ಅಭಿಮಾನ ಮೆರೆದಿದ್ದಾರೆ. ಆ ವಿಡಿಯೋ ಇಲ್ಲಿದೆ ನೋಡಿ..

ನಟ ಕಿಚ್ಚ ಸುದೀಪ್​ (Kichcha Sudeep) ಅವರು ಮೈಸೂರಿಗೆ ತೆರಳಿ ಚಾಮುಂಡೇಶ್ವರಿ ತಾಯಿಯ ದರ್ಶನ ಮಾಡಿದ್ದಾರೆ. ಪತ್ನಿ ಪ್ರಿಯಾ ಕೂಡ ಅವರಿಗೆ ಸಾಥ್​ ನೀಡಿದ್ದಾರೆ. ಸುದೀಪ್ ಬಂದಿರುವ ವಿಷಯ ತಿಳಿದು, ದೇವಸ್ಥಾನದ (Chamundeshwari Temple) ಆವರಣದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದರು. ತಮ್ಮ ನೆಚ್ಚಿನ ನಟನನ್ನು ಹತ್ತಿರದಿಂದ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ‘ಬಾಸ್​ ಬಾಸ್​ ಕಿಚ್ಚ ಬಾಸ್​..’ ಎಂದು ಜೈಕಾರ ಕೂಗುವ ಮೂಲಕ ಜನರು ಅಭಿಮಾನ ಪ್ರದರ್ಶಿಸಿದ್ದಾರೆ. ಕಿಚ್ಚ ಸುದೀಪ್ ಅವರು ಅಭಿಮಾನಿಗಳ ಕಡೆಗೆ ಕೈ ಬೀಸಿ ಮುಂದೆ ಸಾಗಿದ್ದಾರೆ. ಕೆಲವೇ ದಿನಗಳ ಹಿಂದೆ ‘ಮ್ಯಾಕ್ಸ್​’ ಸಿನಿಮಾ (Max Movie) ಚಿತ್ರೀಕರಣವನ್ನು ಸುದೀಪ್​ ಮುಗಿಸಿದ್ದಾರೆ. ಈ ಸಿನಿಮಾ ಮೇಲೆ ಪ್ರೇಕ್ಷಕರಿಗೆ ಸಖತ್​ ಭರವಸೆ ಇದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಈ ಚಿತ್ರದ ಶೂಟಿಂಗ್​ ಮಾಡಲಾಗಿದೆ. ಹಲವು ತಿಂಗಳ ಕಾಲ ಚಿತ್ರೀಕರಣ ನಡೆದಿದ್ದು, ಇತ್ತೀಚೆಗೆ ಮುಕ್ತಾಯ ಆಗಿದೆ. ಆ ಸುದ್ದಿ ತಿಳಿಸಲು ಸುದೀಪ್​ ಅವರು ಒಂದು ವಿಡಿಯೋ ಹಂಚಿಕೊಂಡಿದ್ದರು. 2022ರಲ್ಲಿ ತೆರೆಕಂಡ ‘ವಿಕ್ರಾಂತ್​ ರೋಣ’ ಬಳಿಕ ಸುದೀಪ್​ ಅವರ ಬೇರೆ ಯಾವುದೇ ಸಿನಿಮಾ ಬಿಡುಗಡೆ ಆಗಿಲ್ಲ. ದೀರ್ಘ ಗ್ಯಾಪ್​ ಆಗಿರುವ ಕಾರಣದಿಂದ ‘ಮ್ಯಾಕ್ಸ್​’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಕಾತರ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ