ಸುದೀಪ್​-ಎಂಎನ್​ ಕುಮಾರ್​ ಕೇಸ್​ ವಿಚಾರಣೆ; ಕೋರ್ಟ್​ನಲ್ಲಿ ನಡೆದ ಪ್ರಕ್ರಿಯೆ ಬಗ್ಗೆ ವಿವರಿಸಿದ ಲಾಯರ್​

| Updated By: ಮದನ್​ ಕುಮಾರ್​

Updated on: Aug 10, 2023 | 7:48 PM

Sudeep Court Case: ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಕಿಚ್ಚ ಸುದೀಪ್​ ಅವರು ಗುರುವಾರ (ಆ.10) ಹಾಜರಾಗಿದ್ದಾರೆ. ಈ ವೇಳೆ ಏನೆಲ್ಲ ನಡೆಯಿತು ಎಂಬುದನ್ನು ಅವರ ಪರ ವಕೀಲರು ವಿವರಿಸಿದ್ದಾರೆ. ಈ ಹಂತದಲ್ಲಿ ರಾಜಿಗೆ ಅವಕಾಶ ಇಲ್ಲ ಎಂದು ಅವರು ತಿಳಿಸಿದ್ದಾರೆ.

ನಿರ್ಮಾಪಕ ಎಂ.ಎನ್​. ಕುಮಾರ್​ (MN Kumar) ಅವರು ನಟ ಕಿಚ್ಚ ಸುದೀಪ್​ ವಿರುದ್ಧ ಕೆಲವು ಆರೋಪಗಳನ್ನು ಹೊರಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸುದೀಪ್​ ಅವರು ಮಾನನಷ್ಟ ಮೊಕದ್ದಮೆ (Defamation Case) ಹೂಡಿದ್ದು, ಅದರ ವಿಚಾರಣೆ ಕೋರ್ಟ್​ನಲ್ಲಿ ನಡೆಯುತ್ತಿದೆ. ಇಂದು (ಆಗಸ್ಟ್​ 10) ಸುದೀಪ್​ (Kichcha Sudeep) ಅವರು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಹಾಜರಾಗಿದ್ದಾರೆ. ಈ ವೇಳೆ ಏನೆಲ್ಲ ನಡೆಯಿತು ಎಂಬುದನ್ನು ಅವರ ಪರ ವಕೀಲರು ವಿವರಿಸಿದ್ದಾರೆ. ‘ಕಾನೂನಿನ ಪ್ರಕಾರ ಸುದೀಪ್​ ಅವರು ಬಂದು ನ್ಯಾಯಾಲಯಕ್ಕೆ ತಮ್ಮ ಹೇಳಿಕೆ ನೀಡಿದ್ದಾರೆ. ಮಾನಹಾನಿ ಆಗಿದ್ದಕ್ಕೆ ಇರುವ ಸಾಕ್ಷಿಗಳನ್ನು ಅವರು ಸಲ್ಲಿಸಿದ್ದಾರೆ. ಸುದೀಪ್​ ಅವರು ಕಾನೂನಿನ ಪ್ರಕಾರ ಏನೆಲ್ಲ ಕ್ರಮ ತೆಗೆದುಕೊಂಡಿದ್ದಾರೋ ಅದರ ಬಗ್ಗೆ ಮಾಹಿತಿಯನ್ನು ನ್ಯಾಯಾಲಯಕ್ಕೆ ಒದಗಿಸಿದ್ದಾರೆ. ಈ ಹಂತದಲ್ಲಿ ರಾಜಿಗೆ ಅವಕಾಶ ಇಲ್ಲ. ಸದ್ಯಕ್ಕೆ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ’ ಎಂದು ವಕೀಲರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us on