ರವಿಚಂದ್ರನ್ ಜತೆ ಸುದೀಪ್ ‘ದೃಶ್ಯ’ ಚಿತ್ರ ಮಾಡ್ಬೇಕಿತ್ತು; ಆದರೆ ಮಿಸ್ ಆಗಿದ್ದು ಹೇಗೆ?
‘ದೃಶ್ಯ’ ಚಿತ್ರದ ಮೊದಲನೇ ಪಾರ್ಟ್ ಅನ್ನು ಕಿಚ್ಚ ಸುದೀಪ್ ಅವರೇ ನಿರ್ಮಾಣ ಮಾಡಬೇಕಿತ್ತು. ಅದಕ್ಕಾಗಿ ಮಲಯಾಳಂ ನಿರ್ಮಾಪಕರಿಂದ ರಿಮೇಕ್ ಹಕ್ಕುಗಳನ್ನು ಖರೀದಿಸಲು ಅವರು ಮುಂದಾಗಿದ್ದರು.
ನಟ ‘ಕ್ರೇಜಿ ಸ್ಟಾರ್’ ರವಿಚಂದ್ರನ್ ಅಭಿನಯದ ‘ದೃಶ್ಯ 2’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಶುಕ್ರವಾರ (ನ.26) ನಡೆದ ಟ್ರೇಲರ್ ರಿಲೀಸ್ ಕಾರ್ಯಕ್ರಮದಲ್ಲಿ ಇಡೀ ಚಿತ್ರತಂಡ ಭಾಗಿ ಆಗಿತ್ತು. ಕಿಚ್ಚ ಸುದೀಪ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ರವಿಚಂದ್ರನ್ ಜೊತೆಗಿನ ಬಾಂಧವ್ಯದ ಬಗ್ಗೆ ಅವರು ಹಲವು ವಿಚಾರಗಳನ್ನು ಹಂಚಿಕೊಂಡರು. ವಿಶೇಷ ಏನೆಂದರೆ, ‘ದೃಶ್ಯ’ ಚಿತ್ರದ ಮೊದಲನೇ ಪಾರ್ಟ್ ಅನ್ನು ಸುದೀಪ್ ಅವರೇ ನಿರ್ಮಾಣ ಮಾಡಬೇಕಿತ್ತು. ಹಾಗಾಗಿ ಮಲಯಾಳಂ ನಿರ್ಮಾಪಕರಿಂದ ರಿಮೇಕ್ ಹಕ್ಕುಗಳನ್ನು ಖರೀದಿಸಲು ಸುದೀಪ್ ಮುಂದಾಗಿದ್ದರು. ಆದರೆ ಅಷ್ಟರಲ್ಲಾಗಲೇ ಬೇರೆ ನಿರ್ಮಾಣ ಸಂಸ್ಥೆ ಕೂಡ ಮುಂದೆ ಬಂದಿತ್ತು. ಆ ಸಂದರ್ಭದಲ್ಲಿ ನಿಜಕ್ಕೂ ಏನು ನಡೆಯಿತು ಎಂಬುದನ್ನು ಸುದೀಪ್ ವಿವರಿಸಿದ್ದಾರೆ. ಸದ್ಯ ‘ದೃಶ್ಯ 2’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಡಿ.10ರಂದು ರಿಲೀಸ್ ಆಗಲಿದೆ. ಪಿ. ವಾಸು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.
ಇದನ್ನೂ ಓದಿ:
‘ದೃಶ್ಯ 2’ ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಬಂದ ಕಿಚ್ಚ ಸುದೀಪ್; ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ
ಪುನೀತ ನಮನ: ಕಣ್ಣೀರು ತರಿಸಿತು ಸುದೀಪ್ ಧ್ವನಿಯಲ್ಲಿ ಮೂಡಿಬಂದ ಪುನೀತ್ ವಿಡಿಯೋ

ಬೆಂಗಾವಲು ವಾಹನ ಡ್ರೈವರ್ ಆತ್ಮಹತ್ಯೆ: ಆಸ್ಪತ್ರೆಗೆ ಬಂದು ಕಣ್ಣೀರಿಟ್ಟ ಅಶೋಕ್

ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ

ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ

ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
