BJP Protest: ಪಂಚೆ ಎತ್ತಿ ಸ್ಪೀಕರ್ ಕೋಣೆ ಬಾಗಿಲಿಗೆ ಒದ್ದಿದ್ದು, ಸ್ಪೀಕರ್ ಮೇಲೆ ಫೈಲ್ ಎಸೆದಿದ್ದು ಗೂಂಡಾಗಿರಿ: ಆರ್ ಅಶೋಕ

ಅರುಣ್​ ಕುಮಾರ್​ ಬೆಳ್ಳಿ

Updated on: Jul 21, 2023 | 2:43 PM

ಸುಪ್ರೀಮ್ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು; ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿಗಳನ್ನು ಜನತೆಗೆ ನೀಡಿದ ಲಂಚ ಅಂತ ಹೇಳಿದ್ದಾರೆ. ಇನ್ನಾದರೂ ನಾಚಿಕೆಯಾಗಬೇಕು ಈ ಸರ್ಕಾರಕ್ಕೆ ಎಂದು ಅಶೋಕ ಹೇಳಿದರು.

ಬೆಂಗಳೂರು: ಸದನದಲ್ಲಿ ಸಭಾಧ್ಯಕ್ಷರ ಪೀಠವನ್ನು ಅವಮಾನಿಸಿದ ಹಿನ್ನೆಲೆ 10 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದನ್ನು ವಿರೋಧಿಸಿ ಬಿಜೆಪಿ ಶಾಸಕರು ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ವಿಧಾನ ಸೌಧ ಆವರಣದಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತಾಡಿದ ಆರ್ ಅಶೋಕ (R Ashoka), ವಿಧೇಯಕದ ಪ್ರತಿಗಳನ್ನು ಹರಿದು ಬಿಸಾಡುವುದು ಗೂಂಡಾಗಿರಿಯಲ್ಲ, ಹಿಂದೆ ಸದನದಲ್ಲಿ ಮುಚ್ಚಿದ್ದ ಸ್ಪೀಕರ್ ಕೋಣೆಯ ಬಾಗಿಲನ್ನು ಸಿದ್ದರಾಮಯ್ಯ (Siddaramaiah) ಪಂಚೆ ಎತ್ತಿ ಒದ್ದರಲ್ಲ ಅದು ಗೂಂಡಾಗಿರಿ, ಡಿಕೆ ಶಿವಕುಮಾರ್ ಫೈಲ್ ಗಳನ್ನು ಎತ್ತಿ ಸ್ಪೀಕರ್ ಮೇಲೆ ಎಸೆದಿದ್ದು ಗೂಂಡಾಗಿರಿ, ಸ್ಪೀಕರ್ ಮೇಲೆ ಹಲ್ಲೆ ಮಾಡಲು ಹೋಗಿದ್ದು ಗೂಂಡಾಗಿರಿ ಎಂದು ಅಶೋಕ ಹೇಳಿದರು. ಸುಪ್ರೀಮ್ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು; ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿಗಳನ್ನು ಜನತೆಗೆ ನೀಡಿದ ಲಂಚ ಅಂತ ಹೇಳಿದ್ದಾರೆ. ಇನ್ನಾದರೂ ನಾಚಿಕೆಯಾಗಬೇಕು ಈ ಸರ್ಕಾರಕ್ಕೆ ಎಂದು ಅಶೋಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.