ಯಾದಗಿರಿ: ನೀರು ಹರಿಯುತ್ತಿರುವ ಸೇತುವೆ ಮೇಲೆ ಮಕ್ಕಳು ಮತ್ತು ಮಕ್ಕಳಾಟ ಮಾಡುವ ವಯಸ್ಕರು

ಅರುಣ್​ ಕುಮಾರ್​ ಬೆಳ್ಳಿ

Updated on: May 31, 2025 | 2:33 PM

ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ವ್ಯಾಪಕ ಮತ್ತು ಜೋರಾಗಿ ಮಳೆಯಾಗುತ್ತಿದೆ. ಜಿಲ್ಲೆಯ ಮೂಲಕ ಹರಿದು ಹೋಗುವ ಭೀಮಾನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿಯಾಗಿದೆ. ವಿಡಿಯೋದಲ್ಲಿ ಕಾಣುವ ರಸ್ತೆ ಕಕ್ಕೇರಾ, ಹುಣಸಗಿ ಮತ್ತು ಸುರಪುರಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿರುವುದರಿಂದ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಇನ್ನೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಯಾದಗಿರಿ, ಮೇ 31: ಜನಕ್ಕೆ ಏನು ಹೇಳಿದರೂ, ಬೊಬ್ಬೆ ಹೊಡೆದರೂ ಬುದ್ಧಿ ಬರಲ್ಲ ಮಾರಾಯ್ರೇ. ಇದು ಜಿಲ್ಲೆಯ ಸುರಪುರ ತಾಲೂಕಿನ ಏದಲಭಾವಿಗೆ ಹೋಗುವ ರಸ್ತೆಗೆ ನಿರ್ಮಿಸಲಾಗಿರುವ ಒಂದ ಚಿಕ್ಕ ಸೇತುವೆ. ಆದರೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೇತುವೆ ಮುಳುಗಿ (bridge submerged) ಅದರ ಮೇಲೆ ನೀರು ಹರಿಯುತ್ತಿದೆ. ಅದು ಸರಿ, ಅದರೆ ಜನ ನೀರು ಹರಿಯುತ್ತಿರುವ ಸೇತುವೆ ಮೇಲೆ ನಿಂತು ಹರಟೆ ಹೊಡೆಯುತ್ತಿದ್ದಾರೆ. ಅವರಲ್ಲಿ ಚಿಕ್ಕ ವಯಸ್ಸಿನ ಇಬ್ಬರು ಮಕ್ಕಳೂ ಸೇರಿದ್ದಾರೆ, ಇಬ್ಬರಲ್ಲಿ ಒಂದು ಹೆಣ್ಣು ಮಗು ಬೇರೆ. ಸೇತುವೆ ಮೇಲೆ ನಿಂತಿರುವವರಲ್ಲಿ ಅವರ ತಂದೆ ತಾಯಿ, ಸಂಬಂಧಿಕರು ಇದ್ದಾರೋ ಇಲ್ಲವೋ ಗೊತ್ತಿಲ್ಲ. ನೀರಿನ ರಭಸ ಜೋರಾಗೇನೂ ಇಲ್ಲ ಅದರೆ ಸೇತುವೆ ಮೇಲೆ ಹರಿಯುವ ನೀರಿನಿಂದ ಅಪಾಯ ತಪ್ಪಿದ್ದಲ್ಲ.

ಇದನ್ನೂ ಓದಿ:  Karnataka Rains: ಕರ್ನಾಟಕದಲ್ಲಿ ಜೂನ್​ 2ರವರೆಗೂ ಭಾರಿ ಮಳೆ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್​

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.