ಬೆಂಗಳೂರು: ರಾಜ್ಯದ ಹಲವಾರು ಆಸ್ಪತ್ರೆಗಳಿಗೆ ತುರ್ತು ಚಿಕಿತ್ಸೆಯ ಅವಶ್ಯಕತೆಯಿದೆ. ಚಾಮರಾಜನಗರದ ಜಿಲ್ಲಾಸ್ಪತ್ರೆ ಅವ್ಯವಸ್ಥೆಗಳ ಆಗರ ಅನ್ನೋದನ್ನು ಮತ್ತೊಂದು ವಿಡಿಯೋದಲ್ಲಿ ನೀವು ನೋಡಿದ್ದರೆ. ಇದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯ (Kidwai Hospital) ವಾಸ್ತವ ಸ್ಥಿತಿ. ಕ್ಯಾನ್ಸರ್ ಮಾರಣಾಂತಿಕ ಕಾಯಿಲೆ. ಈ ಆಸ್ಪತ್ರೆಗೆ ಬರುವ ರೋಗಿ ಮತ್ತು ಸಂಬಂಧಿಕರ ಮಾನಸಿಕ ಸ್ಥಿತಿಯ (mental state) ಬಗ್ಗೆ ಒಮ್ಮೆ ಯೋಚಿಸಿ ನೋಡಿ. ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ (treatment) ಇಲ್ಲ ಅಂತೇನೂ ಇಲ್ಲ, ಖಂಡಿತವಾಗಿಯೂ ಇದೆ. ಆದರೆ ಚಿಕಿತ್ಸೆಗೆ ಪೂರಕವಾದ ವಾತಾವರಣ ಇಲ್ಲಿಲ್ಲ ಅಂತ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿರುವ ರೋಗಿಗಳ ಸಂಬಂಧಿಕರು ಹೇಳುತ್ತಾರೆ. ಎಲ್ಲವೂ ಕೆಟ್ಟದಾಗಿದೆ ಅಂತೇನೂ ಅವರು ಹೇಳುತ್ತಿಲ್ಲ. ಆದರೆ, ಏನೇನೆಲ್ಲ ಸುಧಾರಣೆ ಅಗಬೇಕು ಅನ್ನೋದನ್ನು ಅವರು ಬಹಳ ಚೆನ್ನಾಗಿ ವಿವರಿಸುತ್ತಿದ್ದಾರೆ. ಸಂಬಂಧಪಟ್ಟವರು, ಎಲ್ಲಕ್ಕಿಂತ ಮುಖ್ಯವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡಲೇ ಇತ್ತ ಗಮ ಹರಿಸಬೇಕು.
ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ