ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್ ಕಾರು ಅಪಘಾತ ಆಗಿದ್ದು ನಿಜವೇ?
ಸಿನಿಮಾದ ಪ್ರಚಾರಕ್ಕಾಗಿ ಹಲವು ತಂತ್ರಗಳನ್ನು ಮಾಡಲಾಗುತ್ತದೆ. ಕಿರಣ್ ರಾಜ್ ಕೂಡ ಅದೇ ಹಾದಿ ತುಳಿದಿದ್ದಾರಾ ಎಂಬ ಪ್ರಶ್ನೆ ಕೆಲವರಲ್ಲಿ ಮೂಡಿದೆ. ಈ ಕುರಿತು ಅವರ ಆಪ್ತರು ಪ್ರತಿಕ್ರಿಯೆ ನೀಡಿದ್ದಾರೆ. ರಸ್ತೆ ಅಪಘಾತ ಆಗಿದ್ದು ಎಲ್ಲಿ ಮತ್ತು ಯಾವಾಗ ಎಂಬ ಬಗ್ಗೆ ಗಿರೀಶ್ ಅವರು ಮಾಹಿತಿ ನೀಡಿದ್ದಾರೆ. ಗಿಮಿಕ್ ಬಗ್ಗೆ ಎದುರಾದ ಪ್ರಶ್ನೆಗೂ ಅವರು ಉತ್ತರಿಸಿದ್ದಾರೆ.
‘ನಮ್ಮ ಸಿನಿಮಾದ ಪ್ರೀಮಿಯರ್ ಶೋ ಇತ್ತು. ಅದನ್ನು ಮುಗಿಸಿ ಆಶ್ರಮಕ್ಕೆ ಹೋಗಿ ಬರುವಾಗ ರಾತ್ರಿ 9.45ರ ಸುಮಾರಿಗೆ ಅಪಘಾತ ಆಯಿತು. ನಾನು ಕಾರು ಓಡಿಸುತ್ತಿದ್ದೆ. ಕಿರಣ್ ರಾಜ್ ಹಿಂದೆ ಕುಳಿತಿದ್ದರು. ಇದು ಪ್ರಚಾರದ ಗಿಮಿಕ್ ಅಲ್ಲ. ನಮಗೆ ಮಾಡಲು ಸಾಕಷ್ಟು ಕೆಲಸ ಇದೆ. ತಕ್ಷಣ ನಿರ್ಮಾಪಕರು ಬಂದು ಕಿರಣ್ ರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರು’ ಎಂದು ಕಿರಣ್ ರಾಜ್ ಜೊತೆಗಿದ್ದ ಗಿರೀಶ್ ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us