Karnataka Assembly Polls 2023: ಮತಯಾಚಿಸಲು ಹೋದ ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ್ಗೆ ಚಿಕ್ಕಬಾಗೇವಾಡಿ ಗ್ರಾಮಸ್ಥರಿಂದ ತರಾಟೆ
ಜಾಸ್ತಿ ಹೊತ್ತು ನಿಂತಿದ್ದರೆ ಉಳಿದ ಮಾನ ಕೂಡ ಮಣ್ಣುಪಾಲಾಗುತ್ತದೆ ಅಂತ ಮಹಾಂತೇಶ್ ದೊಡ್ಡಗೌಡರ್ ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಬೆಳಗಾವಿ: ಮತದಾರರು ಈಗ ಮೊದಲಿನಂತಿಲ್ಲ, ಅವರನ್ನು ಬಕ್ರಾ ಮಾಡಲಾಗಲ್ಲ, ಎಚ್ಚೆತ್ತುಕೊಂಡಿದ್ದಾರೆ ಅಂತ ರಾಜಕೀಯ ನಾಯಕರಿಗೆ ಅರ್ಥವಾಗದಿರೋದು ದುರಂತವೇ. ಈ ವಿಡಿಯೋ ನೋಡಿ. ಕಿತ್ತೂರು (Kittur) ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ್ (Mahantesh Doddagoudar) ಕ್ಷೇತ್ರದ ಚಿಕ್ಕಬಾಗೇವಾಡಿಗೆ (Chikka Bagewadi) ಮತ ಯಾಚಿಸಲು ಹೋದಾಗ ಜನ ಚೆನ್ನಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ವೋಟು ಕೇಳಲು ಬಂದಿದ್ದೀರಲ್ಲ, ನಿಮಗೆ ಮಾನ ಮರ್ಯಾದೆ ಇಲ್ಲವೇ ಅಂತ ಒಬ್ಬ ಯುವಕ ಹಾಗೂ ಮಹಿಳೆಯರು ಶಾಸಕರಿಗೆ ನೀರಿಳಿಸಿದ್ದಾರೆ. ಶಾಸಕರ ಪರ ಮಾತಾಡಲು ಮುಂದಾದ ಬೆಂಬಲಿಗರು ಸಹ ಲೇವಡಿಗೊಳಗಾಗಿದ್ದಾರೆ. ಜಾಸ್ತಿ ಹೊತ್ತು ನಿಂತಿದ್ದರೆ ಉಳಿದ ಮಾನ ಕೂಡ ಮಣ್ಣುಪಾಲಾಗುತ್ತದೆ ಅಂತ ಮಹಾಂತೇಶ್ ದೊಡ್ಡಗೌಡರ್ ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

