Karnataka Assembly Polls 2023: ಮತಯಾಚಿಸಲು ಹೋದ ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ್ಗೆ ಚಿಕ್ಕಬಾಗೇವಾಡಿ ಗ್ರಾಮಸ್ಥರಿಂದ ತರಾಟೆ
ಜಾಸ್ತಿ ಹೊತ್ತು ನಿಂತಿದ್ದರೆ ಉಳಿದ ಮಾನ ಕೂಡ ಮಣ್ಣುಪಾಲಾಗುತ್ತದೆ ಅಂತ ಮಹಾಂತೇಶ್ ದೊಡ್ಡಗೌಡರ್ ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಬೆಳಗಾವಿ: ಮತದಾರರು ಈಗ ಮೊದಲಿನಂತಿಲ್ಲ, ಅವರನ್ನು ಬಕ್ರಾ ಮಾಡಲಾಗಲ್ಲ, ಎಚ್ಚೆತ್ತುಕೊಂಡಿದ್ದಾರೆ ಅಂತ ರಾಜಕೀಯ ನಾಯಕರಿಗೆ ಅರ್ಥವಾಗದಿರೋದು ದುರಂತವೇ. ಈ ವಿಡಿಯೋ ನೋಡಿ. ಕಿತ್ತೂರು (Kittur) ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ್ (Mahantesh Doddagoudar) ಕ್ಷೇತ್ರದ ಚಿಕ್ಕಬಾಗೇವಾಡಿಗೆ (Chikka Bagewadi) ಮತ ಯಾಚಿಸಲು ಹೋದಾಗ ಜನ ಚೆನ್ನಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ವೋಟು ಕೇಳಲು ಬಂದಿದ್ದೀರಲ್ಲ, ನಿಮಗೆ ಮಾನ ಮರ್ಯಾದೆ ಇಲ್ಲವೇ ಅಂತ ಒಬ್ಬ ಯುವಕ ಹಾಗೂ ಮಹಿಳೆಯರು ಶಾಸಕರಿಗೆ ನೀರಿಳಿಸಿದ್ದಾರೆ. ಶಾಸಕರ ಪರ ಮಾತಾಡಲು ಮುಂದಾದ ಬೆಂಬಲಿಗರು ಸಹ ಲೇವಡಿಗೊಳಗಾಗಿದ್ದಾರೆ. ಜಾಸ್ತಿ ಹೊತ್ತು ನಿಂತಿದ್ದರೆ ಉಳಿದ ಮಾನ ಕೂಡ ಮಣ್ಣುಪಾಲಾಗುತ್ತದೆ ಅಂತ ಮಹಾಂತೇಶ್ ದೊಡ್ಡಗೌಡರ್ ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
