Karnataka Assembly Polls 2023: ಮತಯಾಚಿಸಲು ಹೋದ ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ್ಗೆ ಚಿಕ್ಕಬಾಗೇವಾಡಿ ಗ್ರಾಮಸ್ಥರಿಂದ ತರಾಟೆ
ಜಾಸ್ತಿ ಹೊತ್ತು ನಿಂತಿದ್ದರೆ ಉಳಿದ ಮಾನ ಕೂಡ ಮಣ್ಣುಪಾಲಾಗುತ್ತದೆ ಅಂತ ಮಹಾಂತೇಶ್ ದೊಡ್ಡಗೌಡರ್ ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಬೆಳಗಾವಿ: ಮತದಾರರು ಈಗ ಮೊದಲಿನಂತಿಲ್ಲ, ಅವರನ್ನು ಬಕ್ರಾ ಮಾಡಲಾಗಲ್ಲ, ಎಚ್ಚೆತ್ತುಕೊಂಡಿದ್ದಾರೆ ಅಂತ ರಾಜಕೀಯ ನಾಯಕರಿಗೆ ಅರ್ಥವಾಗದಿರೋದು ದುರಂತವೇ. ಈ ವಿಡಿಯೋ ನೋಡಿ. ಕಿತ್ತೂರು (Kittur) ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ್ (Mahantesh Doddagoudar) ಕ್ಷೇತ್ರದ ಚಿಕ್ಕಬಾಗೇವಾಡಿಗೆ (Chikka Bagewadi) ಮತ ಯಾಚಿಸಲು ಹೋದಾಗ ಜನ ಚೆನ್ನಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ವೋಟು ಕೇಳಲು ಬಂದಿದ್ದೀರಲ್ಲ, ನಿಮಗೆ ಮಾನ ಮರ್ಯಾದೆ ಇಲ್ಲವೇ ಅಂತ ಒಬ್ಬ ಯುವಕ ಹಾಗೂ ಮಹಿಳೆಯರು ಶಾಸಕರಿಗೆ ನೀರಿಳಿಸಿದ್ದಾರೆ. ಶಾಸಕರ ಪರ ಮಾತಾಡಲು ಮುಂದಾದ ಬೆಂಬಲಿಗರು ಸಹ ಲೇವಡಿಗೊಳಗಾಗಿದ್ದಾರೆ. ಜಾಸ್ತಿ ಹೊತ್ತು ನಿಂತಿದ್ದರೆ ಉಳಿದ ಮಾನ ಕೂಡ ಮಣ್ಣುಪಾಲಾಗುತ್ತದೆ ಅಂತ ಮಹಾಂತೇಶ್ ದೊಡ್ಡಗೌಡರ್ ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
