ಕ್ಲಿಯರ್ ಔಟ್ ಆಗಿದ್ದರೂ… ನಾಟಕವಾಡಿ ಬಚಾವಾದ ಕೆಎಲ್ ರಾಹುಲ್!

Updated on: Jun 06, 2026 | 12:55 PM

ಈ ಪಂದ್ಯದ 11ನೇ ಓವರ್‌ನಲ್ಲಿ ಅಫ್ಘಾನಿಸ್ತಾನದ ವೇಗಿ ಝಿಯಾವುರ್ ರೆಹಮಾನ್ ಎಸೆದ ಚೆಂಡನ್ನು ರಾಹುಲ್ ಕಟ್ ಮಾಡಲು ಯತ್ನಿಸಿದರು. ಈ ವೇಳೆ ಚೆಂಡು ಬ್ಯಾಟ್‌ಗೆ ತಗುಲಿ ವಿಕೆಟ್ ಕೀಪರ್ ಕೈ ಸೇರಿತು, ಬ್ಯಾಟ್‌ಗೆ ಚೆಂಡು ಸವರಿದ ಸ್ಪಷ್ಟ ಶಬ್ದವೂ ಕೇಳಿಸಿತು. ಹೀಗಾಗಿ ಅಫ್ಘಾನ್ ಆಟಗಾರರು ಔಟ್​ಗಾಗಿ ಅಪೀಲ್ ಮಾಡಿದ್ದರು. ಇದಾಗ್ಯೂ ಫೀಲ್ಡ್ ಅಂಪೈರ್ ಔಟ್ ನೀಡಿರಲಿಲ್ಲ.

ಮುಲ್ಲನ್‌ಪುರ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದ ಮೊದಲ ದಿನದಾಟದಲ್ಲೇ ಸ್ವಾರಸ್ಯಕರ ಘಟನೆ ನಡೆದಿದೆ. ಅದು ಕೂಡ ಕೆಎಲ್ ರಾಹುಲ್ ಅವರ ನಾಟಕದೊಂದಿಗೆ..! ಹೌದು, ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಿದ್ದರು.

ಈ ಪಂದ್ಯದ 11ನೇ ಓವರ್‌ನಲ್ಲಿ ಅಫ್ಘಾನಿಸ್ತಾನದ ವೇಗಿ ಝಿಯಾವುರ್ ರೆಹಮಾನ್ ಎಸೆದ ಚೆಂಡನ್ನು ರಾಹುಲ್ ಕಟ್ ಮಾಡಲು ಯತ್ನಿಸಿದರು. ಈ ವೇಳೆ ಚೆಂಡು ಬ್ಯಾಟ್‌ಗೆ ತಗುಲಿ ವಿಕೆಟ್ ಕೀಪರ್ ಕೈ ಸೇರಿತು, ಬ್ಯಾಟ್‌ಗೆ ಚೆಂಡು ಸವರಿದ ಸ್ಪಷ್ಟ ಶಬ್ದವೂ ಕೇಳಿಸಿತು. ಹೀಗಾಗಿ ಅಫ್ಘಾನ್ ಆಟಗಾರರು ಔಟ್​ಗಾಗಿ ಅಪೀಲ್ ಮಾಡಿದ್ದರು. ಇದಾಗ್ಯೂ ಫೀಲ್ಡ್ ಅಂಪೈರ್ ಔಟ್ ನೀಡಿರಲಿಲ್ಲ.

ಇದರ ಬೆನ್ನಲ್ಲೇ DRS ರಿವ್ಯೂ ತೆಗೆದುಕೊಳ್ಳುವ ಯೋಚನೆಯಲ್ಲಿದ್ದ ಅಫ್ಘಾನ್ ನಾಯಕ ಹಶ್ಮತುಲ್ಲಾ ಶಾಹಿದಿ ಹಾಗೂ ಕೀಪರ್ ಅಫ್ಸರ್ ಜಜಾಯ್ ಅವರು  ರಾಹುಲ್ ಮುಖ ನೋಡಿದರು. ರಾಹುಲ್ ಅತ್ಯಂತ ಶಾಂತವಾಗಿ, ತಮಗೇನೂ ತಿಳಿಯದಂತೆ ತಲೆ ಅಲ್ಲಾಡಿಸಿ ‘ಬ್ಯಾಟ್‌ಗೆ ಚೆಂಡು ತಗುಲೇ ಇಲ್ಲ’ ಎಂಬಂತೆ ನಟಿಸಿದರು.

ಅಷ್ಟೇ ಅಲ್ಲದೆ ಬ್ಯಾಟ್ ಹ್ಯಾಂಡಲ್​ ಲೂಸ್ ಆಗಿರುವುದರಿಂದ ಶಬ್ದ ಬಂದಿರುವಂತೆ ನಾಟಕವಾಡಿದ ಕೆಎಲ್ ರಾಹುಲ್ ಎಲ್ಲರನ್ನೂ ನಂಬಿಸಿದರು. ಇತ್ತ ಕೆಎಲ್ ರಾಹುಲ್ ಅವರನ್ನು ನಂಬಿಸಿದ ಅಫ್ಘಾನ್ ನಾಯಕ ಡಿಆರ್​ಎಸ್ ರಿವ್ಯೂ ತೆಗೆದುಕೊಳ್ಳಲಿಲ್ಲ.

ಆದರೆ, ಕೆಲವೇ ನಿಮಿಷಗಳಲ್ಲಿ ಬಿಗ್ ಸ್ಕ್ರೀನ್ ಮೇಲೆ  ಅಲ್ಟ್ರಾಎಡ್ಜ್ ತೋರಿಸಿದಾಗ ಬ್ಯಾಟ್‌ಗೆ ಚೆಂಡು ತಗುಲಿರುವುದು ಜಗಜ್ಜಾಹೀರಾಯಿತು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ರಾಹುಲ್ ಅವರ ನಾಟಕ ವಿರುದ್ಧ ಪರ-ವಿರೋಧ ಚರ್ಚೆಗಳು ನಡೆಯು್ತ್ತಿದೆ.

 

Published on: Jun 06, 2026 12:54 PM
Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More