Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿನಿಮಾ ನಟರು ರಾಜಕೀಯಕ್ಕೆ ಬಂದರೆ ಗೌರವ ಕಡಿಮೆಯಾಗುತ್ತದೆ’; ಕಿಚ್ಚ ಸುದೀಪ್​ ಬಗ್ಗೆ ಕೆ.ಎನ್.ರಾಜಣ್ಣ ಮಾತು

‘ಸಿನಿಮಾ ನಟರು ರಾಜಕೀಯಕ್ಕೆ ಬಂದರೆ ಗೌರವ ಕಡಿಮೆಯಾಗುತ್ತದೆ’; ಕಿಚ್ಚ ಸುದೀಪ್​ ಬಗ್ಗೆ ಕೆ.ಎನ್.ರಾಜಣ್ಣ ಮಾತು

ರಾಜೇಶ್ ದುಗ್ಗುಮನೆ
|

Updated on: Jun 19, 2023 | 8:18 AM

ಕಿಚ್ಚ ಸುದೀಪ್ ಅವರು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಈಗ ಸುದೀಪ್ ಬಗ್ಗೆ ಸಚಿವ, ವಾಲ್ಮೀಕಿ ಸಮುದಾಯದ ಮುಖಂಡ ಕೆ.ಎನ್.ರಾಜಣ್ಣ ಮಾತನಾಡಿದ್ದಾರೆ.

ಕಿಚ್ಚ ಸುದೀಪ್ (Sudeep) ಅವರು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಅವರು ಸ್ಟಾರ್ ಪ್ರಚಾರಕರಾಗಿ ಎಂಟ್ರಿ ಕೊಟ್ಟ ಹೊರತಾಗಿಯೂ ಬಿಜೆಪಿಗೆ ಹೆಚ್ಚಿನ ಲಾಭ ಆಗಿಲ್ಲ. ಈಗ ಸುದೀಪ್ ಬಗ್ಗೆ ಸಚಿವ, ವಾಲ್ಮೀಕಿ ಸಮುದಾಯದ ಮುಖಂಡ ಕೆ.ಎನ್.ರಾಜಣ್ಣ ಮಾತನಾಡಿದ್ದಾರೆ. ‘ರಾಜ್​ಕುಮಾರ್ (Rajkumar) ರಾಜಕೀಯಕ್ಕೆ ಬಂದು ಏನು ಬೇಕಾದರೂ ಆಗಬಹುದಿತ್ತು. ಆದರೆ, ಅವರು ರಾಜಕೀಯದಿಂದ ದೂರ ಉಳಿದರು. ಇದಕ್ಕೆ ಅವರನ್ನು ದೇವತಾಮನುಷ್ಯ ಎನಿಸಿಕೊಂಡರು. ಸಿನಿಮಾ ನಟರು ರಾಜಕೀಯಕ್ಕೆ ಬಂದರೆ ಗೌರವ ಕಡಿಮೆಯಾಗುತ್ತದೆ’ ಎಂದರು ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ