AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದಲ್ಲಿ ಭದ್ರತೆ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್​​ನಲ್ಲಿ ಚಾಕು ಪತ್ತೆ

ವಿಧಾನಸೌಧದಲ್ಲಿ ಭದ್ರತೆ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್​​ನಲ್ಲಿ ಚಾಕು ಪತ್ತೆ

ಪ್ರಸನ್ನ ಗಾಂವ್ಕರ್​
| Edited By: ಆಯೇಷಾ ಬಾನು|

Updated on: Jul 10, 2023 | 12:48 PM

Share

ವಿಧಾನಸೌಧದ ಪೂರ್ವ ಗೇಟ್ ಬಳಿ ಭದ್ರತೆ ಪರಿಶೀಲನೆ ವೇಳೆ ಮಹಿಳೆಯೊಬ್ಬರ ಬ್ಯಾಗ್​​ನಲ್ಲಿ ಚಾಕು ಪತ್ತೆಯಾಗಿದೆ. ಮಹಿಳೆಯನ್ನು ಒಳಗೆ ಬಿಡದೆ ವಾಪಸ್ ಕಳುಹಿಸಲಾಗಿದೆ.

ಬೆಂಗಳೂರು: ವಿಧಾನಸೌಧದಲ್ಲಿ(Vidhana Soudha) ಕಲಾಪ ನಡೆಯುತ್ತಿದ್ದು ಭದ್ರತೆ ಪರಿಶೀಲನೆ ವೇಳೆ ಮಹಿಳೆಯೊಬ್ಬರ ಬ್ಯಾಗ್​​ನಲ್ಲಿ ಚಾಕು(Knife) ಪತ್ತೆಯಾಗಿದೆ. ವಿಧಾನಸೌಧದ ಪೂರ್ವ ಗೇಟ್ ಬಳಿ ಪರಿಶೀಲನೆ ವೇಳೆ ಚಾಕು ಪತ್ತೆಯಾಗಿದ್ದು ಮಹಿಳೆಯನ್ನು ಒಳಗೆ ಬಿಡದೆ ವಾಪಸ್ ಕಳುಹಿಸಲಾಗಿದೆ.

ಜುಲೈ 07ರ ಶುಕ್ರವಾರ ಸಿಎಂ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ಮಂಡನೆ ಮಾಡುತ್ತಿದ್ದ ವೇಳೆ ಭದ್ರತಾ ಲೋಪವಾಗಿತ್ತು. ಶಾಸಕ ಎಂದು ಹೇಳಿಕೊಂಡು ಓರ್ವ ವ್ಯಕ್ತಿ ಸದನಕ್ಕೆ ಬಂದು ಶಾಸಕರ ಜಾಗದಲ್ಲಿ 15 ನಿಮಿಷ ಕೂತಿದ್ದರು. ಬಳಿಕ ವ್ಯಕ್ತಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದಂತಹ ಘಟನೆ ನಡೆದಿತ್ತು. ಹೀಗಾಗಿ ಇಂದು(ಜು.10)ವಿಧಾನಸಭೆ ಪ್ರವೇಶ ದ್ವಾರದಲ್ಲಿ ಪೊಲೀಸರು ಪ್ರತಿಯೊಬ್ಬರ ತಪಾಸಣೆ ಮಾಡುತ್ತಿದ್ದಾರೆ. ವಿಧಾನಸಭೆಯ ಪಶ್ಚಿಮ ದ್ವಾರದ ಬಳಿ ಪ್ರತಿಯೊಬ್ಬರ ಐಡಿ ಕಾರ್ಡ್ ಚೆಕಿಂಗ್ ಮಾಡಿ ಒಳ ಬಿಡಲಾಗುತ್ತಿದೆ. ಆದ್ರೆ ವಿಧಾನಸೌಧದಲ್ಲಿ ಭದ್ರತೆ ಪರಿಶೀಲನೆ ವೇಳೆ ಮಹಿಳೆಯೊಬ್ಬರ ಬ್ಯಾಗ್​​ನಲ್ಲಿ ಚಾಕು ಪತ್ತೆಯಾಗಿದೆ. ವಿಧಾನಸೌಧದ ಪೂರ್ವ ಗೇಟ್ ಬಳಿ ಪರಿಶೀಲನೆ ವೇಳೆ ಚಾಕು ಪತ್ತೆಯಾಗಿದ್ದು ಮಹಿಳೆಯನ್ನು ಒಳಗೆ ಬಿಡದೆ ವಾಪಸ್ ಕಳುಹಿಸಲಾಗಿದೆ.

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More