AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು: ಕಾಫಿ ಬೆಳೆ ಹಾನಿ ಭೀತಿ

ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು: ಕಾಫಿ ಬೆಳೆ ಹಾನಿ ಭೀತಿ

Gopal AS
| Edited By: |

Updated on:Aug 21, 2026 | 12:39 PM

Share

ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ಅನಿರೀಕ್ಷಿತವಾಗಿ ಸುರಿದ ಭಾರಿ ಮಳೆಯಿಂದಾಗಿ ಕಾಫಿ ಗಿಡಗಳಲ್ಲಿ ತೇವಾಂಶ ಹೆಚ್ಚಾಗಿ ಕಾಫಿ ಕಾಯಿಗಳು ಉದುರುತ್ತಿವೆ. ಜೂನ್-ಜುಲೈನಲ್ಲಿ ಮಳೆ ಕೊರತೆ ಎದುರಿಸಿದ ನಂತರ ಆಗಸ್ಟ್‌ನಲ್ಲಿ ಭಾರೀ ಮಳೆ ಸುರಿದಿದ್ದು ರೈತರಿಗೆ ಅಪಾರ ನಷ್ಟ ಉಂಟಾಗಿದೆ. ದೇಶದ ಒಟ್ಟು ಕಾಫಿ ಉತ್ಪಾದನೆಯಲ್ಲಿ ಕೊಡಗು ಜಿಲ್ಲೆಯ ಪಾಲು ಗಣನೀಯವಾಗಿದೆ.

ಕೊಡಗು, ಆ.21: ಜಿಲ್ಲೆಯಲ್ಲಿ ಕಾಫಿ ಬೆಳೆಗಾರರು ಪ್ರಸಕ್ತ ಸಾಲಿನಲ್ಲಿ ಭಾರಿ ಮಳೆಯಿಂದಾಗಿ ಹೊಸ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಆಗಸ್ಟ್ ತಿಂಗಳಲ್ಲಿ ಅನಿರೀಕ್ಷಿತವಾಗಿ ಸುರಿದ ಭಾರಿ ಮಳೆಯಿಂದಾಗಿ ಕಾಫಿ ಗಿಡಗಳಲ್ಲಿ ತೇವಾಂಶ ಹೆಚ್ಚಾಗಿ ಕಾಫಿ ಕಾಯಿಗಳು ಉದುರುತ್ತಿವೆ. ಇದು ಕಾಫಿ ಬೆಳೆಗಾರರಿಗೆ ಅಪಾರ ನಷ್ಟವನ್ನು ಉಂಟುಮಾಡಿದೆ. ಸಾಮಾನ್ಯವಾಗಿ ಜೂನ್ ತಿಂಗಳಿಂದ ಮಳೆ ಆರಂಭವಾಗುವ ಕೊಡಗಿನಲ್ಲಿ ಈ ಬಾರಿ ಜೂನ್ ಮತ್ತು ಜುಲೈ ತಿಂಗಳುಗಳಲ್ಲಿ ಮಳೆ ಕೊರತೆ ಇತ್ತು. ಆದರೆ, ಆಗಸ್ಟ್ ತಿಂಗಳ ಮೊದಲ ವಾರದಿಂದ ಶುರುವಾದ ಮಳೆ ನಿರಂತರವಾಗಿ ಸುರಿಯುತ್ತಿದೆ. ಈ ಅಸಮರ್ಪಕ ಮಳೆಯಿಂದಾಗಿ ಮೊದಲು ತೇವಾಂಶ ಕಡಿಮೆ ಇದ್ದ ಭೂಮಿಯಲ್ಲಿ ಈಗ ತೇವಾಂಶ ಹೆಚ್ಚಾಗಿ, ಕಾಫಿ ಕಾಯಿಗಳು ಉದುರಲು ಆರಂಭಿಸಿವೆ. ಕೊಡಗು ದೇಶದ ಒಟ್ಟು ಕಾಫಿ ಉತ್ಪಾದನೆಯಲ್ಲಿ ಶೇಕಡ 35ರಷ್ಟು ಪಾಲು ಹೊಂದಿದೆ. ಕರ್ನಾಟಕದ ಕಾಫಿ ಉತ್ಪಾದನೆಯಲ್ಲಿ ಶೇಕಡ 50ರಷ್ಟು ಕೊಡಗಿನ ಕೊಡುಗೆ ಇದೆ. ವಾರ್ಷಿಕವಾಗಿ ಸುಮಾರು 1.10 ಲಕ್ಷ ಮೆಟ್ರಿಕ್ ಟನ್ ಕಾಫಿಯನ್ನು ಇಲ್ಲಿ ಉತ್ಪಾದಿಸಲಾಗುತ್ತದೆ. ಈ ವಾಣಿಜ್ಯ ಬೆಳೆಗೆ ವಿಮೆ ಅಥವಾ ಪರಿಹಾರ ಸಿಗುವುದು ಕಷ್ಟವಾಗಿರುವುದರಿಂದ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಕೃಷಿ ಇಲಾಖೆ ಅಧಿಕಾರಿಗಳು ಕೆಲವೊಂದು ರಾಸಾಯನಿಕಗಳನ್ನು ಸಿಂಪಡಿಸುವ ಮೂಲಕ ತೇವಾಂಶ ಕಡಿಮೆ ಮಾಡಿ, ಉದುರುವಿಕೆ ಸಮಸ್ಯೆಯನ್ನು ನಿವಾರಿಸುವಂತೆ ಸಲಹೆ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published on: Aug 21, 2026 12:38 PM

Follow Us