ಕೊಡಗಿನಲ್ಲಿ ಆನೆ-ಮಾನವನ ನಡುವಿನ ಸಂಘರ್ಷ: ರೈಲ್ವೆ ಬ್ಯಾರಿಕೇಡ್ ಮುರಿದ ಕಾಡಾನೆ

Updated on: Dec 04, 2025 | 10:06 AM

ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಿದ್ದು, ರಾತ್ರಿ ಮಾತ್ರ ಓಡಾಡುತ್ತಿದ್ದ ಆನೆಗಳು ಈಗ ಹಗಲಿನಲ್ಲೂ ಕಾಣಿಸಿಕೊಳ್ಳುತ್ತಿವೆ. ಮಾನವ-ಆನೆ ಸಂಘರ್ಷ ಮತ್ತೆ ತೀವ್ರಗೊಂಡಿದೆ. ಕುಶಾಲನಗರದ ಅತ್ತೂರು ಗ್ರಾಮದಲ್ಲಿ ಕಾಡಾನೆಯೊಂದು ರೈಲ್ವೆ ಬ್ಯಾರಿಕೇಡ್ ಮುರಿದು ಊರಿಗೆ ನುಗ್ಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಈ ಬೆಳವಣಿಗೆ ವಿಡಿಯೋ ಮೂಲಕ ಹೊರಬಿದ್ದಿದೆ.

ಕೊಡಗು, ಡಿ.4: ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಸಹಜವಾಗಿದೆ. ಕೊಡಗಿನಲ್ಲಿ ಆನೆಗಳ ಪಡೆ ರಾತ್ರಿ ಹೊತ್ತಿನಲ್ಲಿ ಓಡುತ್ತಿತ್ತು. ಆದರೆ ಇದೀಗ ಇದರ ಓಡಾಟ ಹಗಲಿನಲ್ಲೂ ಶುರುವಾಗಿದೆ. ಕೊಡಗಿನಲ್ಲಿ ಆನೆ ಮತ್ತು ಮಾನವ ನಡುವೆ ಸಂಘರ್ಷ ಸ್ವಲ್ಪ ದಿನಗಳಿಂದ ಕಡಿಮೆ ಆಗಿತ್ತು. ಇದೀಗ ಮತ್ತೆ ಶುರುವಾಗಿದೆ. ಕುಶಾಲನಗರ ತಾಲ್ಲೂಕಿನ ಅತ್ತೂರು ಗ್ರಾಮದಲ್ಲಿ ರೈಲ್ವೆ ಬ್ಯಾರಿಕೇಡ್ ಮುರಿದ ಊರಿನ ಒಳಗೆ ಬಂದಿದೆ. ಕಾಡಾನೆ ಅರಣ್ಯ ದಾಟದಂತೆ ಅಳವಡಿಸಲಾಗಿದ್ದ ರೈಲ್ವೆ ಕಂಬಿಯನ್ನೇ ಆನೆ ಮುರಿದು ಹಾಕಿದೆ. ಇದೀಗ ಈ ಬಗ್ಗೆ ವಿಡಿಯೋವೊಂದು ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Follow Us
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More