AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎನ್​ ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?

ಕೆಎನ್​ ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ವಿವೇಕ ಬಿರಾದಾರ|

Updated on: Aug 11, 2025 | 9:12 PM

Share

ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರ ಭವಿಷ್ಯವಾಣಿಗಳು ಮತ್ತೊಮ್ಮೆ ನಿಜವಾಗಿವೆ. ಎರಡು ತಿಂಗಳ ಹಿಂದೆ "ಅರಸನ ಅರಮನೆಗೆ ಕಾರ್ಮೋಡ ಕವಿದಿತು" ಎಂದು ಹೇಳಿದ್ದರು. ಶಾಸಕ ಕೆ.ಎನ್. ರಾಜಣ್ಣ ಅವರ ರಾಜೀನಾಮೆಯಿಂದ ಇದು ಸಾಬೀತಾಗಿದೆ. ಕೇಂದ್ರ ಮತ್ತು ರಾಜ್ಯ ರಾಜಕೀಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ ಎಂದು ಸ್ವಾಮೀಜಿ ಹೇಳಿದ್ದಾರೆ. ಯುಗಾದಿ ಮತ್ತು ಸಂಕ್ರಾಂತಿ ಭವಿಷ್ಯವಾಣಿಗಳ ಬಗ್ಗೆಯೂ ಅವರು ಮಾತನಾಡಿದ್ದಾರೆ.

ಗದಗ, ಆಗಸ್ಟ್​ 11: ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ನುಡಿದ ಭವಿಷ್ಯ ಅನೇಕ ಬಾರಿ ನಿಜವಾಗಿದೆ. 2 ತಿಂಗಳ ಹಿಂದೆಯಷ್ಟೇ ಕೋಡಿಶ್ರೀಗಳು “ಅರಸನ ಅರಮನೆಗೆ ಕಾರ್ಮೋಡ ಕವಿದಿತು” ಎಂದು ಹೇಳಿದ್ದರು. ಕೋಡಿಶ್ರೀಗಳ ಭವಿಷ್ಯ ಈಗ ನಿಜವಾಗಿದೆ ಎಂದು ಹೇಳಲಾಗುತ್ತಿದೆ. ಶಾಸಕ ಕೆ ಎನ್​ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದು, ಈ ಮೂಲಕ ಕೋಡಿಶ್ರೀಗಳ ಭವಿಷ್ಯ ನಿಜವಾಗಿದೆ ಎಂದು ಹಲವರು ಹೇಳುತ್ತಿದ್ದಾರೆ.

ಇನ್ನು 2 ತಿಂಗಳ ಹಿಂದೆ ನುಡಿದ ಭವಿಷ್ಯದ ಬಗ್ಗೆ ಸದ್ಯ ಕೋಡಿಶ್ರೀಗಳು ಮಾತನಾಡಿ, ಅರಸನ ಅರಮನೆಗೆ ಕಾರ್ಮೋಡ ಕವಿದಿತು, ಎರಡು ತಿಂಗಳ ಹಿಂದೆ ಈ ಮಾತು ಹೇಳಿದ್ದೆ. ಕೇಂದ್ರ ಹಾಗೂ ರಾಜ್ಯಕ್ಕೆ ಅಪಾಯ ಆಗುತ್ತೆ. ಕೇಂದ್ರದಲ್ಲಿ ಉಪ ರಾಷ್ಟ್ರಪತಿ ರಾಜೀನಾಮೆ ನೀಡಿದರು. ರಾಜ್ಯದಲ್ಲಿ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿದರು. ನಾವು ಯುಗಾದಿ ಹಾಗೂ ಸಂಕ್ರಾಂತಿ ಭವಿಷ್ಯ ಹೇಳುತ್ತೇವೆ. ರಾಜಕೀಯದಲ್ಲಿ ಕಾರ್ಮೋಡ ಇರೋದೆ ಎಂದು ಹೇಳಿದರು.

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More