ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ರಾಜ್ಯ ರಾಜಕಾರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ

Edited By:

Updated on: Oct 15, 2024 | 3:47 PM

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರ ರಾಜಕೀಯ ಜೀವನದಲ್ಲಿ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಅವರ 40 ವರ್ಷದ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿ ಈ ರೀತಿ ಗಂಭೀರ ಆರೋಪದಲ್ಲಿ ಸಿಲುಕಿಕೊಂಡಿದ್ದಾರೆ. ಇನ್ನು ಮುಡಾ ಹಗರಣ ಸಂಬಂಧ ಸಿಎಂ ವಿರುದ್ಧದ ಲೋಕಾಯುಕ್ತ ತನಿಖೆ ನಡೆಸಿದ್ದು, ಇದರ ಮಧ್ಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಕರ್ನಾಟಕ ರಾಜ್ಯ ರಾಜಕಾರಣದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಚಿಕ್ಕಬಳ್ಳಾಪುರ, (ಅಕ್ಟೋಬರ್ 15): ಮುಡಾ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ನಡೆಸಿದೆ. ಆದರೂ ಸಹ ಈ ಪ್ರಕರಣದಲ್ಲಿ ಇಡಿ ಪ್ರವೇಶ ಮಾಡಿದ್ದು, ಸಿದ್ದರಾಮಯ್ಯನವರಿಗೆ ಟೆನ್ಷನ್​ ಶುರುವಾಗಿದೆ. ಒಂದೆಡೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಬಿಜೆಪಿ ಒತ್ತಾಯಿಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್​ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದರ ಮಧ್ಯ ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಇಂದು (ಅಕ್ಟೋಬರ್ 15) ಚಿಕ್ಕಬಳ್ಳಾಪುರದಲ್ಲಿ ಭಕ್ತರೊಬ್ಬರ ಮನೆಗೆ ಭೇಟಿ ನೀಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೋಡಿಶ್ರೀ, ರಾಜ್ಯ ರಾಜಕಾರಣದಲ್ಲಿ ದುರ್ಯೋಧನ ಗೆಲ್ಲುತ್ತಾನೆ. ಮುಖ್ಯಮಂತ್ರಿಗಳಿಗೆ ನೋವು ಕೊಟ್ಟಾಗಿದೆ. ಮುಖ್ಯಮಂತ್ರಿಗಳ ಪತ್ನಿ ರಂಗ ಪ್ರವೇಶ ಮಾಡಿಯಾಗಿದೆ. ಈ ಮಹಾಭಾರತದಲ್ಲಿ ರಾಜ ಗೆಲ್ಲುತ್ತಾನೆ. ಆದ್ರೆ ದೈವಬಲ ಈಗ ಇಲ್ಲ. ಇನ್ನೂ ಸ್ವಲ್ಪ ದಿನ ರಾಜಕೀಯ ಏರಪೇರು ನಡೆಯುತ್ತೆ ಎಂದು ಮಾರ್ಮಿಕವಾಗಿ ಭವಿಷ್ಯ ನುಡಿದ್ದಾರೆ.

Published on: Oct 15, 2024 03:46 PM
Follow Us
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More