ಚಿಕ್ಕಬಳ್ಳಾಪುರ, (ಅಕ್ಟೋಬರ್ 15): ಮುಡಾ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ನಡೆಸಿದೆ. ಆದರೂ ಸಹ ಈ ಪ್ರಕರಣದಲ್ಲಿ ಇಡಿ ಪ್ರವೇಶ ಮಾಡಿದ್ದು, ಸಿದ್ದರಾಮಯ್ಯನವರಿಗೆ ಟೆನ್ಷನ್ ಶುರುವಾಗಿದೆ. ಒಂದೆಡೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಬಿಜೆಪಿ ಒತ್ತಾಯಿಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದರ ಮಧ್ಯ ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಇಂದು (ಅಕ್ಟೋಬರ್ 15) ಚಿಕ್ಕಬಳ್ಳಾಪುರದಲ್ಲಿ ಭಕ್ತರೊಬ್ಬರ ಮನೆಗೆ ಭೇಟಿ ನೀಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೋಡಿಶ್ರೀ, ರಾಜ್ಯ ರಾಜಕಾರಣದಲ್ಲಿ ದುರ್ಯೋಧನ ಗೆಲ್ಲುತ್ತಾನೆ. ಮುಖ್ಯಮಂತ್ರಿಗಳಿಗೆ ನೋವು ಕೊಟ್ಟಾಗಿದೆ. ಮುಖ್ಯಮಂತ್ರಿಗಳ ಪತ್ನಿ ರಂಗ ಪ್ರವೇಶ ಮಾಡಿಯಾಗಿದೆ. ಈ ಮಹಾಭಾರತದಲ್ಲಿ ರಾಜ ಗೆಲ್ಲುತ್ತಾನೆ. ಆದ್ರೆ ದೈವಬಲ ಈಗ ಇಲ್ಲ. ಇನ್ನೂ ಸ್ವಲ್ಪ ದಿನ ರಾಜಕೀಯ ಏರಪೇರು ನಡೆಯುತ್ತೆ ಎಂದು ಮಾರ್ಮಿಕವಾಗಿ ಭವಿಷ್ಯ ನುಡಿದ್ದಾರೆ.
Published On - 3:46 pm, Tue, 15 October 24