ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಕೋಡಿಮಠ ಶ್ರೀ ಸ್ಫೋಟಕ ಭವಿಷ್ಯ
ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಬಗ್ಗೆ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಸದ್ಯ ರಾಜ್ಯ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಉಳಿದದ್ದು ಸಂಕ್ರಾಂತಿ ಮುಗಿದ ಬಳಿಕವೇ ನೋಡಿ ಹೇಳಬೇಕು ಎಂದು ಧಾರವಾಡದಲ್ಲಿ ಸ್ವಾಮೀಜಿ ತಿಳಿಸಿದ್ದಾರೆ.
ಧಾರವಾಡ, ಅಕ್ಟೋಬರ್ 01: ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಧಾರವಾಡದಲ್ಲಿ (Dharwad) ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಸಂಕ್ರಾಂತಿವರೆಗೆ ಏನೂ ಹೇಳಲ್ಲ, ಸಿದ್ದರಾಮಯ್ಯ ಸರ್ಕಾರಕ್ಕೆ ಭಯವಿಲ್ಲ. ಉಳಿದದ್ದು ಸಂಕ್ರಾಂತಿ ಆದ ಮೇಲೆ ನೋಡಿ ಹೇಳಬೇಕು ಎಂದಿದ್ದಾರೆ. ಬಯಲು ಸೀಮೆಯಲ್ಲಿ ಮಲೆನಾಡು ಮಳೆ ಎಂದು ಈ ಹಿಂದೆ ಹೇಳಿದ್ದೆ. ಮಲೆನಾಡು ಬಯಲುಸೀಮೆ ಆಗಿದೆ, ಬಯಲುಸೀಮೆ ಮಲೆನಾಡು ಆಗಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
