AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kodi Mutt Swamiji: ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು

Kodi Mutt Swamiji: ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Apr 07, 2025 | 12:19 PM

Share

ಕೋಡಿಮಠ ಸ್ವಾಮೀಜಿ ಭವಿಷ್ಯ: ಕೋಡಿಮಠ ಸ್ವಾಮೀಜಿ ಆಗಾಗ ರಾಜಕೀಯ ವಿಚಾರಗಳ ಬಗ್ಗೆ ಭವಿಷ್ಯ, ಮುನ್ಸೂಚನೆ ನೀಡುತ್ತಿರುತ್ತಾರೆ. ಅವರ ಮಾರ್ಮಿಕ ಮಾತುಗಳ ಬಗ್ಗೆ ಜನರಲ್ಲಿಯೂ ಅಷ್ಟೇ ಕುತೂಹಲವಿರುತ್ತದೆ. ಇದೀಗ ಕೋಡಿಮಠ ಶ್ರೀಗಳು ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಮಾತನಾಡಿದ್ದಾರೆ. ಅವರ ಮಾತಿನ ವಿಡಿಯೋ ಇಲ್ಲಿದೆ.

ವಿಜಯಪುರ, ಏಪ್ರಿಲ್ 7: ಉತ್ತರ ಕರ್ನಾಟಕ ಭಾಗದಿಂದ ಎಂಬಿ ಪಾಟೀಲ್ ಮುಖ್ಯಮಂತ್ರಿ ಆಗಲಿ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ವಿಜಯಪುರ‌ ಜಿಲ್ಲೆ ಆಲಮೇಲ ತಾಲೂಕಿನ ಕಡನಿ ಗ್ರಾಮದಲ್ಲಿ ಭಾನುವಾರ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಸ್ವಾಮೀಜಿ, ಮೊನ್ನೆ ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡುತ್ತಿದ್ದೆ. ಈ ವೇಳೆ ಉತ್ತರ ಕರ್ನಾಟಕದಿಂದ ಯಾರಾದರು ಸಿಎಂ ಆಗಬಹುದು ಎಂದರೆ, ಎಂಬಿ ಪಾಟೀಲ್ ಆಗಲಿ ಎಂದಿದ್ದೆ ಎಂದು ಅವರು ಹೇಳಿದರು. ಅಷ್ಟೇ ಅಲ್ಲದೆ, ಎಂಬಿ ಪಾಟೀಲ್ ಅವರನ್ನು ಹಾಡಿಹೊಗಳಿದರು. ಪ್ರಾಕೃತಿಕ ವಿಕೋಪಗಳ ಬಗ್ಗೆಯೂ ಸ್ವಾಮೀಜಿ ಮುನ್ಸೂಚನೆ ನೀಡಿದ್ದು, ವಿವರಗಳಿಗೆ ವಿಡಿಯೋ ನೋಡಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 07, 2025 12:17 PM

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More