ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಪಾರಿ ಕಿಲ್ಲರ್ಸ್​​​ ಅರೆಸ್ಟ್

Edited By:

Updated on: Jul 22, 2025 | 4:57 PM

ಬೆಂಗಳೂರಿನಲ್ಲಿ ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪೊಲೀಸರ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ಸಂಗತಿಗಳು ಬೆಳಕಿಗೆ ಬಂದಿವೆ. ಬಿಕ್ಲು ಶಿವ ಹತ್ಯೆಗೆ ಸುಪಾರಿ ಪಡೆದಿದ್ದ ನಾಲ್ವರು ಸಿಕ್ಕಿಬಿದ್ದಿದ್ದು, ಎಸಿಪಿ ರಂಗಪ್ಪ ನೇತೃತ್ವದ ತಂಡ ನಾಲ್ವರು ಹಂತಕರನ್ನು ಬಂದಿಸಿದೆ. ಇನ್ನು ಬಿಕ್ಲು ಶಿವ ಕೊಲೆಯಾಗಲು ಪ್ರಮುಖ ಕಾರಣ ಏನು ಎನ್ನುವುದನ್ನೂ ಸಹ ಪೊಲೀಸರು ಪತ್ತೆ ಮಾಡಿದ್ದಾರೆ.

ಬೆಂಗಳೂರು, (ಜುಲೈ 22): ರೌಡಿಶೀಟರ್ ಶಿವಪ್ರಕಾಶ್ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಕ್ಲು ಶಿವ ಹತ್ಯೆಗೆ ಸುಪಾರಿ ಪಡೆದಿದ್ದ ನಾಲ್ವರನ್ನ ಪೊಲೀಸರು ಬಂಧಿಸಲಾಗಿದೆ. ಕೋಲಾರ ಜಿಲ್ಲೆಯ ಮಾಲೂರು ಮೂಲದ ನಾಲ್ವರನ್ನು ಬಂಧಿಸುವಲ್ಲಿ ಎಸಿಪಿ ರಂಗಪ್ಪ ನೇತೃತ್ವದ ತಂಡ ಯಶಸ್ವಿಯಾಗಿದೆ. ಬಂಧಿತ ವಿಮಲ್ ಮೂಲಕ ನರಸಿಂಹ ಎನ್ನುವಾತ ಒಂದೂವರೆ ಲಕ್ಷ ರೂಪಾಯಿಗೆ ಬಿಕ್ಲು ಶಿವ ಕೊಲೆಗೆ ಸುಪಾರಿ ಪಡೆದಿರುವುದು ವಿಚಾರಣೆ ವೇಳೆ ಗೊತ್ತಾಗಿದೆ.

Follow Us
Web contact

TV9 Kannada

Read More