Assembly Polls: ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧಿಸಬೇಕೆಂದು ಒತ್ತಾಯಿಸಿ ಅವರ ಬೆಂಗಳೂರು ನಿವಾಸದ ಮುಂದೆ ಬೀಡುಬಿಟ್ಟಿರುವ ಅಭಿಮಾನಿಗಳು

ಅರುಣ್​ ಕುಮಾರ್​ ಬೆಳ್ಳಿ

Updated on: Mar 21, 2023 | 10:41 AM

ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯರ ಅಧಿಕೃತ ನಿವಾಸದ ಮುಂದೆ ಬೀಡು ಬಿಟ್ಟಿರುವ ಬೆಂಬಲಿಗರು ಅವರಿಗೆ ಕೋಲಾರದಿಂದಲೇ ಸ್ಪರ್ಧಿಸುವಂತೆ ಹೈಕಮಾಂಡ್ ಹೇಳದ ಹೊರತು ಅಲ್ಲಿಂದ ಕದಲುವುದಿಲ್ಲ ಎನ್ನುತ್ತಿದ್ದಾರೆ.

ಕೋಲಾರ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ (Siddaramaiah) ಒಳ್ಳೇ ಪೀಕಲಾಟಿಕ್ಕಿಟ್ಟುಕೊಡಿದೆ. ಅವರಿಗೆ ಕೋಲಾರ ವಿಧಾನ ಸಭಾ ಕ್ಷೇತ್ರದಿಂದ (Kolar Constituency) ಸ್ಪರ್ಧಿಸುವ ಉತ್ಕಾಟಾಸೆ ಇತ್ತು. ಆದರೆ, ಹೈಕಮಾಂಡ್ ಭಿನ್ನ ರೀತಿಯಲ್ಲಿ ಯೋಚನೆ ಮಾಡುತ್ತಿರುವಂತಿದೆ. ಮೂಲಗಳ ಪ್ರಕಾರ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದಲೇ (Varuna Constituency) ಸ್ಪರ್ಧಿಸಲಿ ಅಂತ ವರಿಷ್ಠರು ಹೇಳಿದ್ದಾರೆ. ಸಿದ್ದರಾಮಯ್ಯ ಈಗಾಗಲೇ 4-5 ಬಾರಿ ಕೋಲಾರಗೆ ಭೇಟಿ ನೀಡಿ ಪ್ರಚಾರ ಕಾರ್ಯವನ್ನೂ ಅರಂಭಿಸಿದ್ದರಿಂದ ಅಭಿಮಾನಿಗಳು ಸಂತೋಷದಲ್ಲಿದ್ದರು. ಆದರೆ, ಹೈಕಮಾಂಡ್ ಫರ್ಮಾನು ಅವರಿಗೆ ಬೇಸರ ತರಸಿದೆ. ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯರ ಅಧಿಕೃತ ನಿವಾಸದ ಮುಂದೆ ಬೀಡು ಬಿಟ್ಟಿರುವ ಬೆಂಬಲಿಗರು ಅವರಿಗೆ ಕೋಲಾರದಿಂದಲೇ ಸ್ಪರ್ಧಿಸುವಂತೆ ಹೈಕಮಾಂಡ್ ಹೇಳದ ಹೊರತು ಅಲ್ಲಿಂದ ಕದಲುವುದಿಲ್ಲ ಎನ್ನುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.