ಕಲ್ಯಾಣ ಪಂಟಪದಲ್ಲಿ ನೂತನ ವಧು ವರರ ಮೂಲಕ ಮತದಾನದ ಜಾಗೃತಿ, ವಿಡಿಯೋ ನೋಡಿ

ಮತದಾನದ ಪ್ರಮಾಣ ಹೆಚ್ಚಿಸಲು ಚುನಾವಣಾಧಿಕಾರಿಗಳು ನಾನಾ ಪ್ರಯೋಗಳನ್ನು ಮಾಡುತ್ತಿದ್ದಾರೆ. ಅದರಂತೆ ಇಲ್ಲೋರ್ವ ಚುನಾವಣಾಧಿಕಾರಿ ನೂತನ ವಸಂತಕ್ಕೆ ಕಾಲಿಟ್ಟ ವಧು ವರ ಮೂಲಕ ಮತದಾನದ ಜಾಗೃತಿ ಮಾಡಿಸಿದ್ದಾರೆ.

ಕೋಲಾರ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇದೇ ಮೇ10ರಂದು ಮತದಾನ ನಡೆಯಲಿದ್ದು, ಇದಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆಗಳು ಮಾಡಿಕೊಂಡಿದೆ. ಯಾವುದೇ ತೊಂದರೆಗಳಾಗದಂತೆ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಆಯೋಗ ಎಲ್ಲಾ ಕ್ರಮ ಕೈಗೊಂಡಿದೆ. ಅಲ್ಲದೇ ಮತದಾನದ ಪ್ರಮಾಣ ಹೆಚ್ಚಿಸಲು ನಾನಾ ರೀತಿಯಯಾಗಿ ಜಾಗೃತಿ ಮೂಡಿಸುತ್ತಿದೆ. ಅದರಂತೆ ಕೋಲಾರದಲ್ಲಿ ಮದುವೆ ಮನೆಯಲ್ಲಿ ‌ಮತದಾನದ ಜಾಗೃತಿ ಮೂಡಿಸಿದ್ದಾರೆ. ಹೌದು… ಮುಳಬಾಗಿಲು ಪಟ್ಟಣದ ಕಲ್ಯಾಣ ಪಂಟಪದಲ್ಲಿ ಮತದಾನದ ಜಾಗೃತಿ ಮೂಡಿಸಿದ್ದಾರೆ. ನೂತನ ವಧು ವರರ ಮೂಲಕ ಚುನಾವಣಾಧಿಕಾರಿ ಪ್ರತಿಭಾ ನೇತೃತ್ವದಲ್ಲಿ ಜಾಗೃತಿ ಮೂಡಿಸಲಾಗಿದೆ.

Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us