ಮೈತ್ರಿ ಅಭ್ಯರ್ಥಿ ರೋಡ್​ ಶೋ ವೇಳೆ ಮೋದಿ ಪರ ಘೋಷಣೆ; ಕಾಂಗ್ರೆಸ್​ ಶಾಸಕ ಫುಲ್​ ಗರಂ

| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 23, 2024 | 8:41 PM

ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಎರಡು ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಅದರಂತೆ ಇಂದು(ಏ.23) ಕೋಲಾರ ಜಿಲ್ಲೆ ಬಂಗಾರಪೇಟೆ (Bangarapet) ಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ರೋಡ್​ ಶೋ ವೇಳೆ ಕಿರಿಕ್ ಆಗಿದ್ದು, ಮೈತ್ರಿ ಅಭ್ಯರ್ಥಿ ಮಲ್ಲೇಶ್​ ಬಾಬು ರೋಡ್​ ಶೋಗೆ ರಸ್ತೆಯಲ್ಲಿ ಜನ ಜಮಾಯಿಸಿದ್ಧರು. ಈ ವೇಳೆ ಕಾರಿನಲ್ಲಿ ಬಂದ ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್​.ಎನ್​ನಾರಾಯಣಸ್ವಾಮಿ(SN Narayanaswamy) ಎದುರು ಬಿಜೆಪಿ ಹಾಗೂ ಜೆಡಿಎಸ್​ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ. ಈ ಹಿನ್ನೆಲೆ ಕಾರಿನಿಂದ ಹೊರಬಂದು ಶಾಸಕ ನಾರಾಯಣಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಕೋಲಾರ, ಏ.23: ಕೋಲಾರ ಜಿಲ್ಲೆ ಬಂಗಾರಪೇಟೆ(Bangarapet) ಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ರೋಡ್​ ಶೋ ವೇಳೆ ಕಿರಿಕ್ ಆಗಿದ್ದು, ಮೈತ್ರಿ ಅಭ್ಯರ್ಥಿ ಮಲ್ಲೇಶ್​ ಬಾಬು ರೋಡ್​ ಶೋಗೆ ರಸ್ತೆಯಲ್ಲಿ ಜನ ಜಮಾಯಿಸಿದ್ಧರು. ಈ ವೇಳೆ ಕಾರಿನಲ್ಲಿ ಬಂದ ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್​.ಎನ್​ನಾರಾಯಣಸ್ವಾಮಿ(SN Narayanaswamy) ಎದುರು ಬಿಜೆಪಿ ಹಾಗೂ ಜೆಡಿಎಸ್​ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ. ಈ ಹಿನ್ನೆಲೆ ಕಾರಿನಿಂದ ಹೊರಬಂದು ಶಾಸಕ ನಾರಾಯಣಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಶಾಸಕರ ಬೆಂಬಲಿಗರಿಂದ ಎಸ್.ಎನ್.- ಎಸ್.ಎನ್. ಎಂದು ಘೋಷಣೆ ಕೂಗಿದ್ದು, ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಳಿಕ ಶಾಸಕರನ್ನು ಪೊಲೀಸರು ಹಾಗೂ ಕೆಲ ಮುಖಂಡರು ಸಮಾಧಾನ ಪಡಿಸಿ ಕಳಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us on