ಕೋಲಾರ: ಶಾಂತಿ ಸೌಹಾರ್ದತೆಗಾಗಿ ಗಾಂಧಿ ವೇಷ ತೊಟ್ಟು ಮೌನಾಚರಣೆ

Edited By: ಆಯೇಷಾ ಬಾನು

Updated on: Aug 28, 2023 | 10:54 AM

ಕೆಜಿಎಫ್ ತಾಲೂಕು ಕ್ಯಾಸಂಬಳ್ಳಿ ಗ್ರಾಮದ ಶ್ರೀನಿವಾಸರೆಡ್ಡಿ ಎಂಬುವವರು ಶಾಂತಿ ಸೌಹಾರ್ದತೆಗಾಗಿ 12 ಗಂಟೆಗಳ ಕಾಲ ಗಾಂಧಿ ವೇಷಧಾರಿಯಾಗಿ ಗಾಂಧಿ ಪ್ರತಿಮೆ ಬಳಿ ಕುಳಿತು ಮೌನ ಆಚರಣೆ ಮಾಡಿದ್ದಾರೆ. ಸಮಾಜದಲ್ಲಿ ‌ಹಣಕ್ಕಾಗಿ ಸಣ್ಣ ಪುಟ್ಟ ಕಲಹಗಳಿಂದ ಮನುಷ್ಯನ ನೆಮ್ಮದಿ ಹಾಗೂ ಸಮಾಜದ ನೆಮ್ಮದಿ ಹಾಳಾಗುತ್ತಿದೆ ಎಂದು ಗಾಂಧಿ ವೇಷಧಾರಿ ಮೌನಾಚರಣೆ ಮಾಡಿದ್ದಾರೆ.

ಕೋಲಾರ, ಆ.28: ಜಿಲ್ಲೆ‌ಯ ಕೆಜಿಎಫ್ ಪಟ್ಟಣದ ರಾಬರ್ಟ್ ಸನ್ ಪೇಟೆಯಲ್ಲಿ ಗಾಂಧಿ ವೇಷಧಾರಿಯೊಬ್ಬರು ವಿಭಿನ್ನ ರೀತಿಯಲ್ಲಿ ಮೌನಾಚರಣೆ ಮಾಡಿದ್ದಾರೆ. ಕೆಜಿಎಫ್ ತಾಲೂಕು ಕ್ಯಾಸಂಬಳ್ಳಿ ಗ್ರಾಮದ ಶ್ರೀನಿವಾಸರೆಡ್ಡಿ ಎಂಬುವವರು ಶಾಂತಿ ಸೌಹಾರ್ದತೆಗಾಗಿ 12 ಗಂಟೆಗಳ ಕಾಲ ಗಾಂಧಿ ವೇಷಧಾರಿಯಾಗಿ ಗಾಂಧಿ ಪ್ರತಿಮೆ ಬಳಿ ಕುಳಿತು ಮೌನ ಆಚರಣೆ ಮಾಡಿದ್ದಾರೆ. ಸಮಾಜದಲ್ಲಿ ‌ಹಣಕ್ಕಾಗಿ ಸಣ್ಣ ಪುಟ್ಟ ಕಲಹಗಳಿಂದ ಮನುಷ್ಯನ ನೆಮ್ಮದಿ ಹಾಗೂ ಸಮಾಜದ ನೆಮ್ಮದಿ ಹಾಳಾಗುತ್ತಿದೆ ಎಂದು ಗಾಂಧಿ ವೇಷಧಾರಿ ಮೌನಾಚರಣೆ ಮಾಡಿದ್ದಾರೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ವಿಭಿನ್ನ ಪ್ರಯತ್ನ ಮಾಡ್ತಿದ್ದಾರೆ.

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More