ದೇಗುಲದ ಆವರಣದಲ್ಲಿ ಎಸ್ಐಆರ್ ಪ್ರಕ್ರಿಯೆ: ಚರ್ಚೆಗೆ ಗ್ರಾಸವಾದ ಅಧಿಕಾರಿಗಳ ನಡೆ
SIR protocol violation: ಕೋಲಾರದ ಕುರುಬರಪೇಟೆಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಹೊಸ ಪದ್ಧತಿ ಅನುಸರಿಸಲಾಗಿದೆ. ಮನೆ ಮನೆಗೆ ಭೇಟಿ ನೀಡುವ ಬದಲು, ಮತದಾರರನ್ನು ದೇಗುಲದ ಆವರಣಕ್ಕೆ ಕರೆಸಿ ಅರ್ಜಿಗಳನ್ನು ಭರ್ತಿ ಮಾಡಿಸಲಾಗುತ್ತಿದೆ. ಈ ಪರ್ಯಾಯ ವ್ಯವಸ್ಥೆಯು ಆಯೋಗದ ಸೂಚನೆಗಳಿಗೆ ವಿರುದ್ಧವಾಗಿದ್ದು, ಪ್ರಕ್ರಿಯೆಯ ಸಕ್ರಮತೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಕೋಲಾರ, ಜುಲೈ 03: ಜಿಲ್ಲೆಯ ಕುರುಬರಪೇಟೆ ಪ್ರದೇಶದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಆಯೋಗದ ನಿರ್ದಿಷ್ಟ ಸೂಚನೆಗಳಿಗಿಂತ ಭಿನ್ನವಾಗಿ ನಡೆಯುತ್ತಿರುವ ಬಗ್ಗೆ ವರದಿಯಾಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆಗಾಗಿ ಮತದಾರರ ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮ್ಗಳನ್ನು ಭರ್ತಿ ಮಾಡಬೇಕೆಂಬುದು ಆಯೋಗದ ನಿಯಮ. ಆದರೆ, ಕುರುಬರಪೇಟೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಓಗಳು) ಮತದಾರರನ್ನು ದೇಗುಲದ ಆವರಣಕ್ಕೆ ಕರೆಸಿ, ಅಲ್ಲಿಯೇ ಅರ್ಜಿಗಳನ್ನು ಭರ್ತಿ ಮಾಡುವ ಕೆಲಸ ಮಾಡುತ್ತಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD

