ಪಾಠ ಮಾಡೋ ಟೀಚರ್‌ ಮೇಲೆ ವಿದ್ಯಾರ್ಥಿ ತಂದೆಯಿಂದಲೇ ಹಲ್ಲೆ

Edited By:

Updated on: Sep 13, 2025 | 2:49 PM

ಸತತ ಎರಡು ದಿನಗಳಿಂದ ಶಾಲೆಗೆ ಬಂದಿಲ್ಲವೆಂದು ವಿದ್ಯಾರ್ಥಿಯೊಬ್ಬನನ್ನು ಪ್ರಶ್ನಿಸಿದ್ದಕ್ಕೆ ಆತನ ತಂದೆ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕ್ಷೇತ್ರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚೌಡಪ್ಪ ಎಂಬಾತ ಶಾಲೆಗೆ ನುಗ್ಗಿ ಶಿಕ್ಷಕಿ ಮಂಜುಳ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಶಿಕ್ಷಕಿಯನ್ನು ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋಲಾರ, ಸೆಪ್ಟೆಂಬರ್‌ 13: ಮಕ್ಕಳ ಭವಿಷ್ಯವನ್ನು ಸುಂದರವಾಗಿ ರೂಪಿಸುವ ಶಿಕ್ಷಕರು ದೇವರಿಗೆ ಸಮಾನ. ಆದ್ರೆ ಇಲ್ಲೊಬ್ಬ ವ್ಯಕ್ತಿ ಇಂತಹ ಟೀಚರ್‌ ಮೇಲೆಯೇ ಹಲ್ಲೆ ನಡೆಸಿದ್ದಾನೆ. ಸತತ ಎರಡು ದಿನಗಳಿಂದ ಏಕೆ ಶಾಲೆಗೆ ಬಂದಿಲ್ಲ ಎಂದು ವಿದ್ಯಾರ್ಥಿಯೋರ್ವನನ್ನು ಪ್ರಶ್ನೆ ಮಾಡಿದ್ದಕ್ಕೆ ಆತನ ತಂದೆ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಕೋಲಾರ (Kolar) ಜಿಲ್ಲೆಯ ಮಾಲೂರು ತಾಲೂಕಿನ ಕ್ಷೇತ್ರನಹಳ್ಳಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿ ಮಂಜುಳಾ ಎಸ್‌. ಎಂಬವರ ಮೇಲೆ ವಿದ್ಯಾರ್ಥಿಯ ತಂದೆ ಚೌಡಪ್ಪ ಹಲ್ಲೆ ನಡೆಸಿದ್ದಾನೆ. ಪರಿಣಾಮ ಶಿಕ್ಷಕಿ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 13, 2025 02:44 PM
Follow Us
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More