ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಕಲ್ಲು, ದೊಣ್ಣೆಗಳಿಂದ ಬಡಿದಾಟ

Edited By:

Updated on: Dec 19, 2025 | 4:10 PM

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ವಕ್ಫ್ ಬೋರ್ಡ್‌ಗೆ ಸೇರಿದ 11 ಎಕರೆ ಜಮೀನಿಗಾಗಿ ಎರಡು ಕುಟುಂಬಗಳ ಮಧ್ಯೆ ಭೀಕರ ಹೊಡೆದಾಟ ನಡೆದಿದೆ. ಜಮೀನು ತಮ್ಮದೆಂದು ಹೇಳಿಕೊಂಡಿದ್ದು, ಕಲ್ಲು ಮತ್ತು ದೊಣ್ಣೆಗಳಿಂದ ಹಲ್ಲೆ ಮಾಡಲಾಗಿದೆ. ಈದ್ಗಾ ಮತ್ತು ಬಾಡಿಗೆ ಕಟ್ಟಡಗಳಿರುವ ಈ ಆಸ್ತಿ ವಕ್ಫ್ ಬೋರ್ಡ್‌ಗೆ ಸೇರಿದ್ದರೂ, ಕುಟುಂಬಗಳು ಮಾಲಿಕತ್ವಕ್ಕಾಗಿ ಘರ್ಷಣೆಗಿಳಿದಿರುವುದು ಗಂಭೀರ ಪ್ರಕರಣವಾಗಿದೆ.

ಕೋಲಾರ, ಡಿಸೆಂಬರ್​ 19: ವಕ್ಫ್ ಬೋರ್ಡ್ ಆಸ್ತಿಗಾಗಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿರುವಂತಹ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿ ನಡೆದಿದೆ. ಮಾಸ್ತಿ ಗ್ರಾಮದಲ್ಲಿರುವ ವಕ್ಫ್ ಬೋರ್ಡಿಗೆ ಸೇರಿದ 11 ಎಕರೆ ಜಮೀನಿಗಾಗಿ ಗಲಾಟೆ ನಡೆದಿದೆ. ಸಯ್ಯದ್ ರಸೂಲ್ ದರ್ವೇಶ್ ವಂಸಸ್ಥರು ವಕ್ಫ್ ಬೋರ್ಡ್​ಗೆ ಜಮೀನು ದಾನವಾಗಿ ನೀಡಿದ್ದಾರೆ. ಇದರಲ್ಲಿರುವ ಈದ್ಗಾ, ಬಾಡಿಗೆ ಕಟ್ಟಡ ಎಲ್ಲವೂ ವಕ್ಫ್ ಬೋರ್ಡಿಗೆ ಬರುತ್ತೆ. ಆದರೆ ಈ ಆಸ್ತಿ ನಮ್ಮದು ಎಂದು ಸಯ್ಯದ್ ರಸೂಲ್ ಕುಟುಂಬಸ್ಥರು ಗಲಾಟೆ ಮಾಡಿ ಮಸೀದಿ ಮುಖಂಡರ ಮೇಲೆ ಕಲ್ಲು, ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More