ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್ ​

Edited By: ವಿವೇಕ ಬಿರಾದಾರ

Updated on: Oct 13, 2024 | 10:49 AM

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಬಸ್​ಗಳಲ್ಲಿ ನಿತ್ಯ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದೊಯ್ಯುವುದು ಚಾಕಲನ ಕರ್ತವ್ಯವಾಗಿದೆ. ಆದರೆ ನಿಪ್ಪಾಣಿ ಘಟಕದ ಬಸ್​​​​ ಚಾಲಕ ಧೂಮಪಾನ ಮಾಡುತ್ತ ಚಾಲನೆ ಮಾಡಿದ್ದಾನೆ.

ಕೊಪ್ಪಳ, ಅಕ್ಟೋಬರ್​ 13: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC)ಯ ಬಸ್​ಗಳಲ್ಲಿ ನಿತ್ಯ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದೊಯ್ಯುವುದು ಚಾಕಲನ ಕರ್ತವ್ಯವಾಗಿದೆ. ಚಾಲನೆ ಸಮಯದಲ್ಲಿ ಚಾಲಕ ಮೊಬೈಲ್​ನಲ್ಲಿ ಮಾತನಾಡುವುದು, ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. ಆದರೂ ಕೂಡ ನಿಪ್ಪಾಣಿ ಘಟಕದ (Nipani Depot) ಬಸ್​​​​ ಚಾಲಕ ಧೂಮಪಾನ ಮಾಡುತ್ತ ವಾಹನ ಓಡಿಸಿದ್ದಾನೆ.

ನಿಪ್ಪಾಣಿ ಘಟಕಕ್ಕೆ ಸೇರಿದ ಕೆಎ 23, ಎಫ್ 1045 ನಂಬರ್​ನ ಕೆಎಸ್​ಆರ್​ಟಿಸಿ ಬಸ್​ ಗಂಗಾವತಿಯಿಂದ ಕೋಲ್ಹಾಪುರಕ್ಕೆ ತೆರಳುತ್ತಿತ್ತು. ಚಾಲಕ ಬೀಡಿ ಸೇದುತ್ತಾ ಬಸ್ ಚಲಾಯಿಸಿದ್ದಾನೆ. ಚಾಲಕ ಧೂಮಪಾನ ಮಾಡುವುದನ್ನು ಪ್ರಯಾಣಿಕ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾನೆ. ಬಸ್​ನಲ್ಲಿ ಧೂಮಪಾನ ನಿಷೇಧವಿದ್ದರೂ ಚಾಲಕ ಧೂಮಪಾನ ಮಾಡಿದ್ದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀಡಿ ಸೇದುತ್ತಾ ಬಸ್​ ಚಾಲನೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More