ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

Updated on: Dec 12, 2025 | 6:03 PM

ಪ್ರೀತಿಸಿ, ದೈಹಿಕ ಸಂಪರ್ಕ ಬೆಳೆಸಿ ನಂತರ ಮದುವೆಯ ನಾಟಕವಾಡಿ ಮೋಸ ಮಾಡಿದ ಆರೋಪದ ಮೇಲೆ ಯುವಕನೊಬ್ಬನ ಅದ್ಧೂರಿ ಮದುವೆಯನ್ನು (Marriage) ಸಂತ್ರಸ್ತ ಯುವತಿ ನಿಲ್ಲಿಸಿದ ಘಟನೆ ರಾಯಚೂರು (Raichur) ನಗರದಲ್ಲಿ ನಡೆದಿದೆ. ಬಳ್ಳಾರಿಯಲ್ಲಿ ಓದುತ್ತಿದ್ದ ವೇಳೆ ರಿಷಬ್, ಕೊಪ್ಪಳದ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಗರ್ಭಪಾತ ಮಾಡಿಸಿ ಕೈಕೊಟ್ಟಿದ್ದು, ಇದೀಗ ಬೇರೆ ಯುವತಿ ಜತೆ ಮದುವೆ ಮಾಡಿಕೊಳ್ಳಲು ಮುಂದಾಗಿದ್ದ.

ರಾಯಚೂರು, (ಡಿಸೆಂಬರ್ 12): ಪ್ರೀತಿಸಿ, ದೈಹಿಕ ಸಂಪರ್ಕ ಬೆಳೆಸಿ ನಂತರ ಮದುವೆಯ ನಾಟಕವಾಡಿ ಮೋಸ ಮಾಡಿದ ಆರೋಪದ ಮೇಲೆ ಯುವಕನೊಬ್ಬನ ಅದ್ಧೂರಿ ಮದುವೆಯನ್ನು (Marriage) ಸಂತ್ರಸ್ತ ಯುವತಿ ನಿಲ್ಲಿಸಿದ ಘಟನೆ ರಾಯಚೂರು (Raichur) ನಗರದಲ್ಲಿ ನಡೆದಿದೆ. ಬಳ್ಳಾರಿಯಲ್ಲಿ ಓದುತ್ತಿದ್ದ ವೇಳೆ ರಿಷಬ್, ಕೊಪ್ಪಳದ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಗರ್ಭಪಾತ ಮಾಡಿಸಿ ಕೈಕೊಟ್ಟಿದ್ದು, ಇದೀಗ ಬೇರೆ ಯುವತಿ ಜತೆ ಮದುವೆ ಮಾಡಿಕೊಳ್ಳಲು ಮುಂದಾಗಿದ್ದ. ಈ ವಿಚಾರ ತಿಳಿಯುತ್ತಿದ್ದಂತೆಯೇ ಪ್ರೇಯಿಸಿ ಸ್ಥಳಕ್ಕೆ ಬಂದು ಇಂದು(ಡಿಸೆಂಬರ್ 12) ನಡೆಯಬೇಕಿದ್ದ ಮದುವೆ ನಿಲ್ಲಿಸಿದ್ದಾಳೆ. ಸದ್ಯ ಪ್ರಿಯಕರನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಸಂತ್ರಸ್ತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಪ್ರಿಯಕರ ರಿಷಬ್ ಮೋಸದ ಬಗ್ಗೆ ಎಳೆ ಎಳೆಯಾಗಿ ಬಿಟ್ಟಿದ್ದಾಳೆ.

ಇದನ್ನೂ ಓದಿ: ಇನ್ನೇನು ತಾಳಿ ಕಟ್ಟುವ ವೇಳೆಯಲ್ಲೇ ಮಂಟಪ್ಪಕ್ಕೆ ಪ್ರೇಯಸಿ ಎಂಟ್ರಿ:ಕಕ್ಕಾಬಿಕ್ಕಿಯಾದ ಪ್ರಿಯಕರ

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More