ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು, ಮುಂದೇನು?
ಕೊಪ್ಪಳ ತಾಲೂಕಿನ ಕಿನ್ನಾಳ ಬಳಿ ಇರೋ ಹಿರೇಹಳ್ಳ ಜಲಾಶಯ 1.67 ಟಿಎಮ್ ಸಿ ನೀರು ಸಂಗ್ರಹ ಸಾಮರ್ಥ ಹೊಂದಿದೆ. 20 ಸಾವಿರಕ್ಕೂ ಅಧಿಕ ಎಕರೆ ಪ್ರದೇಶಕ್ಕೆ ನೀರಾವರಿ ಹಾಗೂ ಕುಡಿಯೋ ನೀರಿಗಾಗಿ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಆದ್ರೆ, ಈ ಬಾರಿಯ ಬೇಸಿಗೆ ಬಿಸಿಲಿನ ತಾಪಕ್ಕೆ ಹಿರೇಹಳ್ಳ ಜಲಾಶಯ ಬತ್ತಿ ಹೋಗಿದೆ.
ಕೊಪ್ಪಳ, (ಏಪ್ರಿಲ್ 24): ಕೊಪ್ಪಳ ತಾಲೂಕಿನ ಕಿನ್ನಾಳ ಬಳಿ ಇರೋ ಹಿರೇಹಳ್ಳ ಜಲಾಶಯ (hirehalla reservoir) 1.67 ಟಿಎಮ್ ಸಿ ನೀರು ಸಂಗ್ರಹ ಸಾಮರ್ಥ ಹೊಂದಿದೆ. 20 ಸಾವಿರಕ್ಕೂ ಅಧಿಕ ಎಕರೆ ಪ್ರದೇಶಕ್ಕೆ ನೀರಾವರಿ ಹಾಗೂ ಕುಡಿಯೋ ನೀರಿಗಾಗಿ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಆದ್ರೆ, ಈ ಬಾರಿಯ ಬೇಸಿಗೆ ಬಿಸಿಲಿನ ತಾಪಕ್ಕೆ ಹಿರೇಹಳ್ಳ ಜಲಾಶಯ ಬತ್ತಿ ಹೋಗಿದೆ. ಅಲ್ಲದೇ ಬಿಸಿಲಿನ ಹೊಡೆತಕ್ಕೆ ಬರಡು ಭೂಮಿಯಂತಾಗಿದೆ. ಸದ್ಯ ಜಲಾಶಯದಲ್ಲಿ ಕೇವಲ ಶೇಕಡಾ 20 ರಷ್ಟು ನೀರು ಸಂಗ್ರಹವಿದ್ದು, ಒಂದು ತಿಂಗಳಲ್ಲೇ ಈ ನೀರು ಸಹ ಖಾಲಿಯಾಗಲಿದೆ. ಬಳಿಕ ಜಲಾಶವೇ ಖಾಲಿ ಖಾಲಿಯಾಗಲಿದೆ. ಇದರಿಂದ ಈ ಭಾಗದ ಜನರಿಗೆ ಕುಡಿಯುವ ನೀರಿಗೆ ಬರ ಎದುರಾಗಲಿದೆ. ಈ ಕುರಿತು ನಮ್ಮ ಪ್ರತಿನಿಧಿ ಶಿವಕುಮಾರ್ ಪತ್ತಾರ ನೀಡಿರೋ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.
ಇದನ್ನೂ ನೋಡಿ: ಹೊರಗೆ ಬಂದು ಮಾತಾಡ್ಲಿ: ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
Loading...
Unable to load recommendations.
Follow Us
