ಮಾನವೀಯತೆ ಮರೆತ್ರಾ ವೈದ್ಯರು?: ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ

Edited By:

Updated on: Mar 05, 2026 | 12:36 PM

ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಚಿಕ್ಕಬೊಮ್ಮನಾಳದ ಹುಲಿಗೆಮ್ಮ ಎಂಬ ಗಾಯಗೊಂಡ ಮಹಿಳೆಯನ್ನು ರಾತ್ರಿ 11 ಗಂಟೆಗೆ ಕರೆತಂದರೂ, ಆಸ್ಪತ್ರೆ ಸಿಬ್ಬಂದಿ ಮತ್ತು ವೈದ್ಯರು ದಾಖಲಿಸಿಕೊಳ್ಳದೆ ನಿರ್ಲಕ್ಷ್ಯ ತೋರಿದ್ದಾರೆ. ಚಿಕಿತ್ಸೆಗಾಗಿ ಕಾದ ಮಹಿಳೆ ಸ್ಟ್ರೆಚರ್ ಮೇಲೆ ರಾತ್ರಿಯಿಡೀ ಮಲಗಿದ್ದರು. ಬೆಳಗ್ಗೆ 9 ಗಂಟೆಯವರೆಗೂ ಯಾವುದೇ ಆರೈಕೆ ಸಿಕ್ಕಿಲ್ಲವೆಂದು ಸಂಬಂಧಿಕರು ಆರೋಪಿಸಿದ್ದಾರೆ.

ಕೊಪ್ಪಳ, ಮಾರ್ಚ್​ 05: ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ. ಬಿದ್ದು ಗಾಯಗೊಂಡಿದ್ದ ಚಿಕ್ಕಬೊಮ್ಮನಾಳ ನಿವಾಸಿ ಹುಲಿಗೆಮ್ಮ ಎಂಬ ಮಹಿಳೆಯನ್ನು ರಾತ್ರಿ 11 ಗಂಟೆಗೆ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ವೈದ್ಯರು ಮಾನವೀಯತೆಯನ್ನು ಮರೆತು, ಅವರನ್ನು ಅಡ್ಮಿಟ್ ಮಾಡಿಕೊಳ್ಳದೆ ನಿರ್ಲಕ್ಷ್ಯ ತೋರಿದ್ದಾರೆ. ಗಾಯಾಳು ಹುಲಿಗೆಮ್ಮ ಚಿಕಿತ್ಸೆಗಾಗಿ ರಾತ್ರಿಯಿಡೀ ಸ್ಟ್ರೆಚರ್ ಮೇಲೆ ಮಲಗಿದ್ದರು. ಬೆನ್ನು ಮೂಳೆಗೆ ಪೆಟ್ಟಾಗಿ, ನರ ಬ್ಲಾಕ್ ಆಗಿದೆ ಎಂದು ವೈದ್ಯರು ಹೇಳಿದ್ದು, ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದಿದ್ದಾರೆ. ಆದರೆ, ರಕ್ತದೊತ್ತಡ ಸಾಮಾನ್ಯ ಸ್ಥಿತಿಗೆ ಬರಲಿ, ಹಿಂದಿನ ಗಾಯ ವಾಸಿಯಾಗಲಿ, ಮೂತ್ರ ವಿಸರ್ಜನೆ ಸರಿಯಾಗಲಿ, ಊರಿಗೆ ಹೋಗಿ ಚಿಕಿತ್ಸೆ ಪಡೆದು ಬನ್ನಿ ಎಂದು ಹೇಳಿ ದಾಖಲಾತಿಯನ್ನು ನಿರಾಕರಿಸಿದ್ದಾರೆ. ಬೆಳಗ್ಗೆ 9 ಗಂಟೆಯಾದರೂ ಯಾವುದೇ ವೈದ್ಯರು ಅವರತ್ತ ತಿರುಗಿಯೂ ನೋಡಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Published on: Mar 05, 2026 12:36 PM
Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More