ಎಣ್ಣೆ ಮತ್ತಲ್ಲಿ ಗುಂಡು ಹಾರಿಸಿಕೊಂಡ ಆಸಾಮಿ, ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ

Updated on: Oct 27, 2025 | 6:38 PM

ಕೊಪ್ಪಳದ ಕುಕುನೂರು ಲಿಮಿಟ್ಸ್‌ನಲ್ಲಿ ಆನಂದ್ ನಿಂಗಪ್ಪ ಪೊಲೀಸ್ ಪಾಟೀಲ್ ಎಂಬ ವ್ಯಕ್ತಿ ಮದ್ಯಪಾನ ಮಾಡಿ ತನಗೆ ತಾನೇ ಸಿಂಗಲ್ ಬ್ಯಾರೆಲ್ ಗನ್ನಿನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆಯುಧದ ಮೂಲದ ಬಗ್ಗೆ ತೀವ್ರ ತನಿಖೆ ನಡೆಸುತ್ತಿದ್ದಾರೆ. ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಸ್ಥಿರವಾಗಿದೆ.

ಕೊಪ್ಪಳ, ಅ.27: ಕುಡಿತದಿಂದ ಜೀವಕ್ಕೆ ಅಪಾಯ ತಂದುಕೊಂಡ ಅನೇಕ ಘಟನೆಗಳನ್ನು ನೋಡಿದ್ದೇವೆ. ಇದೀಗ ಕೊಪ್ಪಳ ಜಿಲ್ಲೆಯ ಕುಕುನೂರು ಎಂಬಲ್ಲಿ ನಿನ್ನೆ ರಾತ್ರಿ ಸುಮಾರು 8.30 ರಿಂದ 9.00 ಗಂಟೆಯ ನಡುವೆ ಆನಂದ್ ನಿಂಗಪ್ಪ ಪೊಲೀಸ್ ಪಾಟೀಲ್ ಎಂಬ ವ್ಯಕ್ತಿ ತಮಗೆ ತಾವೇ ಗುಂಡು ಹಾರಿಸಿಕೊಂಡಿದ್ದಾರೆ. ಮದ್ಯಪಾನದ ಅಮಲಿನಲ್ಲಿದ್ದ ಅವರು ಸಿಂಗಲ್ ಬ್ಯಾರೆಲ್ ವೆಪನ್ ಬಳಸಿ ಗುಂಡು ಹಾರಿಸಿಕೊಂಡಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆ ಕುರಿತು, ಗಾಯಾಳು ಮಾವ ಹನುಮಂತಪ್ಪ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಆರ್ಮ್ಸ್ ಆಕ್ಟ್ (ಶಸ್ತ್ರಾಸ್ತ್ರ ಕಾಯಿದೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಸ್‌ಪಿ, ಸಿಪಿಐ ಮತ್ತು ಡಿವೈಎಸ್‌ಪಿ ಸೇರಿದಂತೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಜತೆ ಮಾತನಾಡಿದ್ದಾರೆ. ಪ್ರಸ್ತುತ ಆನಂದ್ ನಿಂಗಪ್ಪ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಈ ಘಟನೆಗೆ ಬಳಸಿದ ವೆಪನ್ ಮೂಲದ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More