ಕೊಪ್ಪಳ: ಎಂಬಿಬಿಎಸ್​​ ಸೀಟ್​​ಗಾಗಿ ನಕಲಿ ಅಂಗವಿಕಲ ಪ್ರಮಾಣ ಪತ್ರ; ಅಧಿಕಾರಿ ಬಂಧನ

Edited By:

Updated on: Sep 18, 2025 | 9:45 AM

ಹಣದಾಸೆಗೆ ನಕಲಿ ಪ್ರಮಾಣ ಪತ್ರ ನೀಡಿದ ನೌಕರ ಇದೀಗ ಪೊಲೀಸರ ಅತಿಥಿ ಆಗಿರುವಂತಹ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕಳೆದ ಕೆಲ ವರ್ಷಗಳಿಂದ ನಕಲಿ ಪ್ರಮಾಣ ಪತ್ರ ನೀಡುವ ದಂಧೆಯನ್ನ ಮಾಡ್ತಿದ್ದ ಆತ ಪೊಲೀಸರ ಬಲೆಗೆ ಬಿದ್ದಿದ್ದು, ಇದೀಗ ಆತನ ಬಂಧನದಿಂದ ನಕಲಿ ಪ್ರಮಾಣ ಪತ್ರಕ್ಕೆ ಸಹಿ ಮಾಡಿದ ವೈದ್ಯರಿಗೂ ಢವ ಢವ ಶುರುವಾಗಿದೆ.

ಕೊಪ್ಪಳ, ಸೆಪ್ಟೆಂಬರ್​​ 18: ಜಿಲ್ಲೆಯಲ್ಲಿ ಬಹುದೊಡ್ಡ ಕರ್ಮಕಾಂಡ ಒಂದು ಬಯಲಾಗಿದೆ. ಎಂಬಿಬಿಎಸ್​​ ಸೀಟ್​​ಗಾಗಿ ನಕಲಿ ಅಂಗವಿಕಲ ಪ್ರಮಾಣ ಪತ್ರವನ್ನು ಸೃಷ್ಟಿಸಿರುವಂತಹ ಘಟನೆ ನಡೆದಿದೆ. ಸದ್ಯ ಜಿಲ್ಲೆಯ ಕುಕನೂರ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ನೇತ್ರ ತಪಸಾಣಾ ಅಧಿಕಾರಿಯನ್ನ ಪೊಲೀಸರು ಬಂಧಿಸಿದ್ದಾರೆ. ಸುಧಾಕರ್​ ಬಂಧಿತ ಅಧಿಕಾರಿ. ಸುಮಾರು 21 ವಿದ್ಯಾರ್ಥಿಗಳಿಗೆ ಸುಧಾಕರ್ ನಕಲಿ ಅಂಗವಿಕಲ ಪ್ರಮಾಣ ಪತ್ರ ನೀಡಿರುವ ಆರೋಪ ಕೇಳಿಬಂದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More