ಕೊಪ್ಪಳದಲ್ಲಿ ಪುನೀತ್​ ರಾಜ್​ಕುಮಾರ್​ ಪುತ್ಥಳಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿದ ಅಭಿಮಾನಿಗಳು

ಕೊಪ್ಪಳದಲ್ಲಿ ಅಪ್ಪು ಪುತ್ತಳಿಗೆ ಹೂವುಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ಮಕ್ಕಳು, ಮಹಿಳೆಯರು ಕೂಡ ಈ ಪುತ್ಥಳಿಗೆ ಪೂಜೆ ಮಾಡಿ, ನಮನ ಸಲ್ಲಿಸಿದ್ದಾರೆ.

ಕೊಪ್ಪಳದಲ್ಲಿ ಪುನೀತ್​ ರಾಜ್​ಕುಮಾರ್​ ಪುತ್ಥಳಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿದ ಅಭಿಮಾನಿಗಳು
| Updated By: ಮದನ್​ ಕುಮಾರ್​

Updated on: Mar 13, 2022 | 9:40 AM

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರಿಗೆ ಅಭಿಮಾನಿಗಳು ದೇವರ ಸ್ಥಾನವನ್ನೇ ನೀಡಿದ್ದಾರೆ. ಅಪ್ಪು ಹೆಸರನ್ನು ಅಮರವಾಗಿಸುವ ಕಾರ್ಯ ಎಲ್ಲೆಡೆ ನಡೆಯುತ್ತಿದೆ. ಪುನೀತ್​ ರಾಜ್​ಕುಮಾರ್​ ಅವರು ಹೃದಯಾಘಾತದಿಂದ ನಿಧನರಾಗಿ ನಾಲ್ಕು ತಿಂಗಳು ಕಳೆದಿದೆ. ಅವರ ಮೇಲೆ ಜನರಿಗೆ ಇರುವ ಅಭಿಮಾನ ಎಂದಿಗೂ ಕೊನೆಯಾಗುವಂಥದ್ದಲ್ಲ. ಕರ್ನಾಟಕದ ಮೂಲೆಮೂಲೆಯಲ್ಲೂ ಪುನೀತ್​ ಹೆಸರು ರಾರಾಜಿಸುತ್ತಿದೆ. ಅನೇಕ ಕಡೆಗಳಲ್ಲಿ ಅವರ ಪ್ರತಿಮೆ, ಪುತ್ಥಳಿಯನ್ನು ಸ್ಥಾಪಿಸಲಾಗಿದೆ. ಕೊಪ್ಪಳದಲ್ಲಿ (Koppal) ಅಪ್ಪು ಪುತ್ಥಳಿಗೆ ಹೂವುಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ಮಕ್ಕಳು, ಮಹಿಳೆಯರು ಕೂಡ ಈ ಪುತ್ಥಳಿಗೆ ಪೂಜೆ ಮಾಡಿ, ನಮನ ಸಲ್ಲಿಸಿದ್ದಾರೆ. ಪುನೀತ್​ ರಾಜ್​ಕುಮಾರ್​ ಬಗ್ಗೆ ಜನರಿಗೆ ಇರುವ ಅಭಿಮಾನ ಎಂಥದ್ದು ಎಂಬುದಕ್ಕೆ ಈ ರೀತಿ ಅನೇಕ ಘಟನೆಗಳು ಸಾಕ್ಷಿ ಒದಗಿಸುತ್ತಿವೆ. ಪ್ರತಿ ದಿನ ಅಭಿಮಾನಿಗಳು (Puneeth Rajkumar Fans) ಪುನೀತ್​ ಅವರನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಅನೇಕ ರಸ್ತೆ, ವೃತ್ತ, ಪಾರ್ಕ್​ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪುನೀತ್​ ರಾಜ್​ಕುಮಾರ್​ ಹೆಸರು ಇಡಲಾಗಿದೆ.

ಇದನ್ನೂ ಓದಿ:

‘ಪುನೀತ್​ ನನ್ನ ಮಗು ಆಗಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು’ ಎಂದಿದ್ದರು ಬಿ. ಸರೋಜಾದೇವಿ

ಸೈನಿಕನ ಗೆಟಪ್​ನಲ್ಲಿ ಆಹಾ ಎಷ್ಟು ಚಂದ ಪುನೀತ್​; ಇಲ್ಲಿವೆ ‘ಜೇಮ್ಸ್​’ ಸಿನಿಮಾದ ಫೋಟೋಗಳು

Follow us