ಟಿವಿ9 ವರದಿ ಇಂಪ್ಯಾಕ್ಟ್: ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು

Edited By:

Updated on: Dec 23, 2025 | 7:36 PM

ಕೊಪ್ಪಳ ಜಿಲ್ಲೆಯ ಕನಕಗಿರಿ ಪೊಲೀಸ್ ಠಾಣೆಯಲ್ಲಿ ದೂರುದಾರರಿಂದ ಜೆರಾಕ್ಸ್ ಪೇಪರ್‌ ಬಂಡಲ್ ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಗರಿ ಠಾಣೆಯ ಕಾನ್ಸ್​ಟೇಬಲ್ ಪರಶುರಾಮ್​​ರನ್ನು ಅಮಾನತುಗೊಳಿಸಿ ಎಸ್​ಪಿ ರಾಮ್​ ಅರಸಿದ್ದಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಟಿವಿ9 ಸುದ್ದಿ ಬಿತ್ತರಿಸಿತ್ತು. ವರದಿ ಹಿನ್ನಲೆ ಕ್ರಮಕೈಗೊಳ್ಳಲಾಗಿದೆ. ವಿಡಿಯೋ ನೋಡಿ.

ಕೊಪ್ಪಳ, ಡಿಸೆಂಬರ್​ 23: ದೂರುದಾರರಿಂದ ಠಾಣೆಗೆ ಪೇಪರ್ ಬಂಡಲ್ ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ಕನಕಗರಿ ಪೊಲೀಸ್ ಠಾಣೆ ಪಿಸಿ ಪರಶುರಾಮ್​​​ರನ್ನು ಅಮಾನತುಗೊಳಿಸಲಾಗಿದೆ. ಟಿವಿ9 ವರದಿ ಹಿನ್ನೆಲೆಯಲ್ಲಿ ಎಸ್​ಪಿ ರಾಮ್​ ಅರಸಿದ್ದಿ ಕ್ರಮಕೈಗೊಂಡಿದ್ದಾರೆ.  ಪರಶುರಾಮ್ ದೂರುದಾರರ ಬಳಿ ಜೆರಾಕ್ಸ್ ಪೇಪರ್ ತರಿಸಿದ್ದರು. ಈ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More