ಗೃಹಲಕ್ಷ್ಮಿ ಹಣದಲ್ಲಿ ಜೆಸಿಬಿ ತರಿಸಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ

Edited By:

Updated on: Jun 04, 2025 | 9:21 AM

ಗೃಹ ಲಕ್ಷ್ಮಿ ಹಣದಿಂದ ಫ್ರಿಜ್ಡ್ಜ್, ಬೈಕ್ ಖರೀದಿ ಮಾಡಿದ್ದನ್ನು ಈ ಹಿಂದೆ ಕೇಳಿದ್ದೇವೆ. ಆದರೆ, ಇದೀಗ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಯರೇಹಂಚಿನಾಳ ರೈತ ಮಹಿಳೆ ಸವಿತಾ ನಾಗರಡ್ಡಿ ಎಂಬವರು ಸಾರ್ವಜನಿಕ ರಸ್ತೆಯ ದುರಸ್ತಿಗೆ ಗೃಹಲಕ್ಷ್ಮಿ ಹಣ ಬಳಸಿ ಮಾದರಿಯಾಗಿದ್ದಾರೆ. ಜೆಸಿಬಿ ತರಿಸಿ ಮುಳ್ಳು ಕಂಟಿಗಳನ್ನು ತೆರವುಗೊಳಿಸಿದ ಅವರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕೊಪ್ಪಳ, ಜೂನ್ 4: ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಯರೇಹಂಚಿನಾಳ ಗ್ರಾಮದ ರೈತ ಮಹಿಳೆ ಸವಿತಾ ನಾಗರಡ್ಡಿ ಎಬವರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣ ವಿನಿಯೋಗಿಸಿ ಸಾರ್ವಜನಿಕ ರಸ್ತೆಯನ್ನು ಸ್ವಚ್ಛಗೊಳಿಸಿ ಗಮನ ಸೆಳೆದಿದ್ದಾರೆ. ಯರೇಹಂಚಿನಾಳದಿಂದ ಕೋಟಮಚಗಿ ಸಂಪರ್ಕಿಸುವ ರಸ್ತೆ ಬದಿ ಬೆಳೆದ ಮುಳ್ಳು ಕಂಟಿಗಳನ್ನು ಜೆಸಿಬಿ ತರಿಸಿ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ರಸ್ತೆಯುದ್ದಕ್ಕೂ ಮುಳ್ಳು ಕಂಟಿಗಳು ಬೆಳೆದಿರುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ತೆರವು ಮಾಡಿಕೊಡಿ ಎಂದು ಸ್ಥಳೀಯಾಡಳಿತಕ್ಕೆ ಅವರು ಮನವಿ ಮಾಡಿದ್ದರು. ಬಹಳ ದಿನಗಳಾದರೂ ಆಡಳಿತ ಕ್ರಮ ಕೈಗೊಳ್ಳದ ಕಾರಣ ತಾವೇ ಕ್ರಮ ಕೈಗೊಂಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More