ಕೊಪ್ಪಳ; ಮುರಡಬಸವೇಶ್ವರ ಮಹಾ ರಥೋತ್ಸವದಲ್ಲಿ RCB ಪರ ಜೈಕಾರ ಹಾಕಿ ಕುಣಿದು ಕುಪ್ಪಳಿಸಿದ ಅಭಿಮಾನಿಗಳು

Edited By:

Updated on: Mar 26, 2024 | 8:57 AM

ಮಾರ್ಚ್​ 25ರಂದು ಬೆಂಗಳೂರಿನಲ್ಲಿ ಆರ್​ಸಿಬಿ ಮೊದಲ ಪಂದ್ಯವಿತ್ತು. ಈ ವೇಳೆ ಕೊಪ್ಪಳದಲ್ಲಿ ನಡೆದ ಐತಿಹಾಸಿಕ ಶ್ರೀ ಮುರಡಬಸವೇಶ್ವರ ಮಹಾ ರಥೋತ್ಸವದಲ್ಲಿ ಅಭಿಮಾನಿಗಳು ಆರ್​ಸಿಬಿ ಪರ ಜಯಘೋಷ ಕೂಗಿ ಸಂಭ್ರಮಿಸಿದರು. ದೇವರ ಜಾತ್ರೆಯಲ್ಲೂ ಆರ್​ಸಿಬಿ ಅಭಿಮಾನಿಗಳ ಹವಾ ಜೋರಾಗಿತ್ತು.

ಕೊಪ್ಪಳ, ಮಾರ್ಚ್​.26: ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂಧ್ಯದಲ್ಲಿ ಪಂಜಾಬ್ ವಿರುದ್ಧ ಆರ್​ಸಿಬಿ (RCB) ರೋಚಕ ಗೆಲುವು ಕಂಡಿದೆ. 4 ವಿಕೆಟ್​ಗಳಿಂದ ಗೆದ್ದು RCB ತವರಿನಲ್ಲೇ ಹೊಸ ಅಧ್ಯಾಯ ಆರಂಭಿಸಿದೆ. ಇದು ಅಭಿಮಾನಿಗಳ ಹರ್ಷೋದ್ಗಾರಕ್ಕೆ ಕಾರಣವಾಗಿದೆ. ಅದು ಯಾವ ಮಟ್ಟಿಗೆ ಅಂದ್ರೆ ಕೊಪ್ಪಳ (Koppal) ಜಿಲ್ಲೆಯ ಕಾರಟಗಿ ತಾಲೂಕಿನ ಯರಡೋಣ ಗ್ರಾಮದ ಆರಾಧ್ಯ ದೈವ ಐತಿಹಾಸಿಕ ಶ್ರೀ ಮುರಡಬಸವೇಶ್ವರ ಮಹಾ ರಥೋತ್ಸವದಲ್ಲಿ ಅಭಿಮಾನಿಗಳು ಆರ್​ಸಿಬಿ ಪರ ಜಯಘೋಷ ಕೂಗಿದ್ದಾರೆ. ದೇವರ ಜಾತ್ರೆಯಲ್ಲೂ ಆರ್​ಸಿಬಿ ಹವಾ ಜೋರಾಗಿದೆ.

ಜಾತ್ರಾ ಮಹೋತ್ಸವದಲ್ಲಿ ಆರ್​ಸಿಬಿ ಅಭಿಮಾನಿಗಳು ಸಖತ್ ಡಾನ್ಸ್ ಆಡಿ ಜೈಕಾರ ಹಾಕಿ ಸಂಭ್ರಮಿಸಿದ್ದಾರೆ. ಹೋಳಿ ಹುಣ್ಣಿಮೆಯ ಹಿನ್ನೆಲೆಯಲ್ಲಿ ನಿನ್ನೆ ಅದ್ದೂರಿ ರಥೋತ್ಸವ ನಡೆಯಿತು. ಈ ವೇಳೆ ಅಭಿಮಾನಿಗಳು ಆರ್​ಸಿಬಿ ಪರ ಜೈಕಾರ ಹಾಕಿ ಡಾನ್ಸ್ ಮಾಡಿ ಸಂಭ್ರಮಿಸಿದರು. ಆರ್​ಸಿಬಿ, ಆರ್​ಸಿಬಿ ಎಂದು ಕುಣಿದು ಕುಪ್ಪಳಿಸಿದರು. ಸದ್ಯ ನಿನ್ನೆಯ ಪಂದ್ಯ ಗೆದ್ದಿದ್ದು ಅಭಿಮಾನಿಗಳು ಮತ್ತಷ್ಟು ಸಂತೋಷದಲ್ಲಿದ್ದಾರೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More