ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ!
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಉದ್ಘಾಟಿಸಬೇಕಿದ್ದ ನವೀಕೃತ ಕೊಪ್ಪಳ ರೈಲು ನಿಲ್ದಾಣದಲ್ಲಿ ಉದ್ಘಾಟನೆಗೂ ಮುನ್ನವೇ ಸೋರಿಕೆ ಕಾಣಿಸಿಕೊಂಡಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನಿಲ್ದಾಣದ ಉದ್ಘಾಟನೆಗಾಗಿ ಸಿದ್ಧತೆಗಳು ನಡೆಯುತ್ತಿದ್ದವು. ವೇದಿಕೆ ನಿರ್ಮಾಣ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಆದರೆ, ಮಳೆಯಾದ ಕಾರಣ ನವೀಕೃತಗೊಂಡ ರೈಲು ನಿಲ್ದಾಣದ ಚಾವಣಿಯಿಂದ ನೀರು ಸೋರಿದ್ದು, ಕಾರ್ಯಕ್ರಮಕ್ಕೆ ಅಳವಡಿಸಿದ್ದ ಸೌಂಡ್ ಬಾಕ್ಸ್ಗಳು ನೀರಲ್ಲಿ ನೆನೆದು ಹೋಗಿವೆ. ಅಲ್ಲದೆ, ಪೈಪ್ಲೈನ್ ಸಹ ಹಾನಿಗೊಳಗಾಗಿ ಎರಡೂ ಕಡೆಗಳಿಂದ ನೀರು ಹೊರಬರುತ್ತಿರುವುದು ಕಂಡುಬಂದಿವೆ.
ಕೊಪ್ಪಳ, ಜುಲೈ 17: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಉದ್ಘಾಟಿಸಬೇಕಿದ್ದ ನವೀಕೃತ ಕೊಪ್ಪಳ ರೈಲು ನಿಲ್ದಾಣದಲ್ಲಿ ಉದ್ಘಾಟನೆಗೂ ಮುನ್ನವೇ ಸೋರಿಕೆ ಕಾಣಿಸಿಕೊಂಡಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನಿಲ್ದಾಣದ ಉದ್ಘಾಟನೆಗಾಗಿ ಸಿದ್ಧತೆಗಳು ನಡೆಯುತ್ತಿದ್ದವು. ವೇದಿಕೆ ನಿರ್ಮಾಣ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಆದರೆ, ಮಳೆಯಾದ ಕಾರಣ ನವೀಕೃತಗೊಂಡ ರೈಲು ನಿಲ್ದಾಣದ ಚಾವಣಿಯಿಂದ ನೀರು ಸೋರಿದ್ದು, ಕಾರ್ಯಕ್ರಮಕ್ಕೆ ಅಳವಡಿಸಿದ್ದ ಸೌಂಡ್ ಬಾಕ್ಸ್ಗಳು ನೀರಲ್ಲಿ ನೆನೆದು ಹೋಗಿವೆ. ಅಲ್ಲದೆ, ಪೈಪ್ಲೈನ್ ಸಹ ಹಾನಿಗೊಳಗಾಗಿ ಎರಡೂ ಕಡೆಗಳಿಂದ ನೀರು ಹೊರಬರುತ್ತಿರುವುದು ಕಂಡುಬಂದಿವೆ.
ಕಳಪೆ ಕಾಮಗಾರಿಯ ಬಗ್ಗೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಉದ್ಘಾಟನೆಗೂ ಮುನ್ನವೇ ಇಂತಹ ಪರಿಸ್ಥಿತಿ ಎದುರಾಗಿರುವುದಕ್ಕೆ ಪ್ರಶ್ನಿಸಿದ್ದಾರೆ. ಪ್ರಧಾನಿಯವರಿಂದ ಉದ್ಘಾಟನೆಗೊಳ್ಳಬೇಕಿದ್ದ ಪ್ರಮುಖ ಯೋಜನೆಯಲ್ಲಿ ಕಳಪೆ ಕಾಮಗಾರಿ ನಡೆದಿರುವುದು ಮುಜುಗರದ ಸಂಗತಿಯಾಗಿದೆ ಎಂದು ಹಲವರು ಹೇಳಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

