ಕೋಟೆಕಾರು ಬ್ಯಾಂಕ್ ದರೋಡೆಕೋರನ ಕಾಲಿಗೆ ಪೊಲೀಸ್ ಗುಂಡು, ಕ್ರೈಮ್ ಸ್ಪಾಟ್​ನಿಂದ ಟಿವಿ9 ವರದಿ

ಅರುಣ್​ ಕುಮಾರ್​ ಬೆಳ್ಳಿ

Updated on: Jan 21, 2025 | 10:09 PM

ಕ್ರೈಮ್ ನಡೆದ ಜಾಗದಲ್ಲಿ ಪೊಲೀಸ್ ಅಧಿಕಾರಿಗಳು, ಸಿಸಿಬಿ ಪೊಲೀಸರು ನೆರೆದಿದ್ದಾರೆ. ಎಫ್​ಎಸ್​ಎಲ್ ತಂಡ ಕೂಡ ಅಲ್ಲಿಗೆ ಅಗಮಿಸಿದೆ. ಮಣಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗುವ ಪ್ರಯತ್ನ ಮಾಡಿದ್ದರಿಂದ ಅನಿವಾರ್ಯವಾಗಿ ಗುಂಡು ಹಾರಿಸಬೇಕಾಯಿತು ಎಂದು ಪೊಲೀಸರು ಹೇಳುತ್ತಿದ್ದಾರೆ. ಸ್ಪಾಟ್ ಮಹಜರ್​ಗಾಗಿ ಕೇವಲ ಮಣಿಯನ್ನು ಮಾತ್ರ ಕರೆತರಲಾಗಿತ್ತು ಎಂದು ವರದಿಗಾರ ಹೇಳುತ್ತಾರೆ.

ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆಗೆ ಸಂಬಂಧಿಸಿದಂತೆ ಇಂದು ಮತ್ತೊಂದು ಬೆಳವಣಿಗೆ ನಡೆದಿದೆ. ನಾವು ಈಗಾಗಲೇ ವರದಿ ಮಾಡಿರುವ ಹಾಗೆ ಪ್ರಕರದಲ್ಲಿ ಪೊಲೀಸರು ಮೂವರು ಜನರನ್ನು ಬಂಧಸಿದ್ದು, ಸಿಸಿಬಿ ಮತ್ತು ಉಳ್ಳಾಲ ಠಾಣೆಯ ಪೊಲೀಸರು ಬಂಧಿತರಲ್ಲಿ ಒಬ್ಬನಾಗಿರುವ ಕಣ್ಣನ್ ಮಣಿ ಎಂಬುವನನ್ನು ಬ್ಯಾಂಕ್​ನಿಂದ ಒಂದಿ ಕಿಮೀ ದೂರವಿರುವ ಅಲಂಕಾರ್ ಗುಡ್ಡೆಗೆ ಸ್ಪಾಟ್ ಮಹಜರ್​ಗೆ ಅಂತ ಕರೆತಂದಾಗ ಅವನು ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾನೆ. ಅಗಲೇ ಶರೀಫ್ ಹೆಸರಿನ ಇನ್ಸ್​ಪೆಕ್ಟರ್ ಒಬ್ಬರು ಅವನ ಕಾಲಿಗೆ ಗುಂಡು ಹಾರಿಸಿ ಗಾಯಗೊಳಿಸಿದ್ದಾರೆ. ಅವನನ್ನು ನಗರದ ಎನಪೊಯಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮ ಮಂಗಳೂರು ವರದಿಗಾರ ಘಟನಾ ಸ್ಥಳದಿಂದ ವರದಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮಂಗಳೂರಿನ ಕೋಟೆಕಾರು ಬ್ಯಾಂಕ್​​ ದರೋಡೆ: ಮೂವರು ಆರೋಪಿಗಳ ಬಂಧನ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.