‘ನಮಗೆ ಮೋಸ ಆಗಿದ್ದು ನಿಜ’; ಪುಷ್ಪಾ ಬಗ್ಗೆ ‘ಕೊತ್ತಲವಾಡಿ’ ಕಲಾವಿದೆ ಸ್ವರ್ಣ ಬೇಸರ

Updated on: Sep 23, 2025 | 11:35 AM

‘ಕೊತ್ತಲವಾಡಿ’ ಸಿನಿಮಾ ಸದ್ದು ಮಾಡಲು ವಿಫಲವಾಗಿದೆ. ಈ ಮಧ್ಯೆ ಕಲಾವಿದರಿಗೆ ಹಣ ನೀಡಿಲ್ಲ ಎಂಬ ಆರೋಪ ಅವರ ವಿರುದ್ಧ ಕೇಳಿ ಬಂದಿದೆ. ಈಗ ‘ಕೊತ್ತಲವಾಡಿ’ ಸಿನಿಮಾ ನಿರ್ಮಾಪಕಿ ಪುಷ್ಪಾ ವಿರುದ್ಧ ಕಲಾವಿದೆ ಸ್ವರ್ಣಾ ಅವರು ಆರೋಪ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಕೊತ್ತಲವಾಡಿ’ ಸಿನಿಮಾ ಕಲಾವಿದರಿಗೆ ನಿರ್ಮಾಪಕಿ ಪುಷ್ಪಾ ಕಡೆಯಿಂದ ಹಣ ಪಾವತಿ ಆಗಿಲ್ಲ ಎಂಬ ಆರೋಪ ಇದೆ. ಹೀಗಿರುವಾಗಲೇ ಈ ಚಿತ್ರದಲ್ಲಿ ನಟಿಸಿದ್ದ ಸ್ವರ್ಣ ಅವರ ಆಡಿಯೋ ವೈರಲ್ ಆಗಿತ್ತು. ಈಗ ಅವರು ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ. ಇಷ್ಟೆಲ್ಲ ದೊಡ್ಡ ಮಟ್ಟದಲ್ಲಿ ಸುದ್ದಿ ಆದರೂ, ನಿರ್ಮಾಪಕರ ಕಡೆಯಿಂದಾಗಲೀ ಅಥವಾ ನಿರ್ದೇಶಕರ ಕಡೆಯಿಂದಾಗಲೀ ಕರೆ ಬಂದಿಲ್ಲ ಎಂದು ಸ್ವರ್ಣಾ ಹೇಳಿದ್ದಾರೆ. ಅಲ್ಲದೆ, ತಮಗೆ ಮೋಸ ಆಗಿದ್ದು ನಿಜ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More