ಕಾಯಕ ಸಮಾಜಗಳ ಸಂಘಟನೆಯಲ್ಲಿ ಸಿದ್ದರಾಮಯ್ಯ ನಂತರ ಬರುವ ಹೆಸರೆಂದರೆ ಕೆಪಿ ನಂಜುಂಡಿ: ಡಿಕೆ ಶಿವಕುಮಾರ್

Updated on: Apr 24, 2024 | 1:00 PM

ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾಗಿದ್ದ ಅವರು ನಿನ್ನೆಯಷ್ಟೇ ಧಾರವಾಡಲ್ಲಿರುವ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರ ಮನೆಗೆ ಹೋಗಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಿದರು. ನಂಜುಂಡಿ ಅವರು ಪಕ್ಷಕ್ಕೆ ವಾಪಸ್ಸಾದರೆ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದರು, ಅವರ ಸೂಚನೆಯಂತೆ ತಾನು ನಂಜುಂಡಿಯವರೊಂದಿಗೆ ಕಳೆದ ವಾರ ಮಾತುಕತೆ ನಡೆಸಿದ್ದೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮವೊಂದರಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ಎಐಸಿಸಿ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲಾ (Randeep Surjewala) ಮತ್ತು ಇತರ ನಾಯಕರ ಸಮ್ಮುಖದಲ್ಲಿ ವಿಶ್ವಕರ್ಮ ಸಮುದಾಯದ ಅಗ್ರಗಣ್ಯ ನಾಯಕ ಕೆಪಿ ನಂಜುಂಡಿ (KP Nanjundi) ಕಾಂಗ್ರೆಸ್ ಪಕ್ಷ ಸೇರಿದರು. ಅವರನ್ನು ಮತ್ತು ಇನ್ನೂ ಹಲವಾರು ವಿಶ್ವಕರ್ಮ ಸಮುದಾಯದ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತಾಡಿದ ಶಿವಕುಮಾರ್, ನಂಜುಂಡಿಯವರನ್ನು ಮುಕ್ತವಾಗಿ ಕೊಂಡಾಡಿದರು. ನಂಜುಂಡಿ ಸಂಘಟನಾ ಚಾತುರ್ಯವನ್ನು ಹೊಗಳಿದ ಅವರು ಕಾಯಕ ಸಮಾಜದ ಜನರನ್ನು ಸಂಘಟಿಸುವ ಕಾರ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬಿಟ್ಟರೆ ಅದನ್ನು ಸಮಪರ್ಕವಾಗಿ ಮತ್ತು ಮುತುವರ್ಜಿಯಿಂದ ಮಾಡಿದವರು ನಂಜುಂಡಿ ಅಂತ ಹೇಳಿದರೆ ಅತಿಶಯೋಕ್ತಿ ಅನಿಸದು ಎಂದು ಹೇಳಿದರು. ಮುಂದುವರಿದು ಮಾತಾಡಿದ ಅವರು, ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾಗಿದ್ದ ಅವರು ನಿನ್ನೆಯಷ್ಟೇ ಧಾರವಾಡಲ್ಲಿರುವ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರ ಮನೆಗೆ ಹೋಗಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಿದರು. ನಂಜುಂಡಿ ಅವರು ಪಕ್ಷಕ್ಕೆ ವಾಪಸ್ಸಾದರೆ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದರು, ಅವರ ಸೂಚನೆಯಂತೆ ತಾನು ನಂಜುಂಡಿಯವರೊಂದಿಗೆ ಕಳೆದ ವಾರ ಮಾತುಕತೆ ನಡೆಸಿದ್ದೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಅಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚೊಂಬನ್ನು ಅರಗಿಸಿಕೊಳ್ಳಲಾಗದ ಬಿಜೆಪಿಯಿಂದ ಪಿಕ್​​ಪಾಕೆಟ್ ಜಾಹೀರಾತು: ಡಿಕೆ ಶಿವಕುಮಾರ್ ತಿರುಗೇಟು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More