ಜೋರು ಹಿಡಿದ ಆಪರೇಶನ್ ಹಸ್ತ, ಚನ್ನಪಟ್ಟಣದ ಸುಮಾರು 300 ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ!

ಅರುಣ್​ ಕುಮಾರ್​ ಬೆಳ್ಳಿ

Updated on: Apr 12, 2024 | 10:29 AM

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬೇರೆ ಬೇರೆ ಭಾಗಗಳ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಲೇ ಇದ್ದಾರೆ ಇದುವರೆಗೆ ಏನಿಲ್ಲವೆಂದರೂ ಸುಮಾರು 5,000 ಮುಖಂಡರು ಪಕ್ಷಕ್ಕೆ ಬಂದಿದ್ದಾರೆ ಎಂದು ಶಿವಕುಮಾರ್ ಹೇಳಿದರು. ಹೊಸದಾಗಿ ಪಕ್ಷ ಸೇರಿದವರಿಗೆ ಸಮಯ ವ್ಯರ್ಥ ಮಾಡದಂತೆ ತಿಳಿಸಿರುವುದಾಗಿ ಹೇಳಿದ ಶಿವಕುಮಾರ್ ಅವರ ಭವಿಷ್ಯ ಮುಖ್ಯ ಮತ್ತು ಅದರ ಬಗ್ಗೆಯೂ ತಮ್ಮ ಪಕ್ಷ ಯೋಚಿಸಬೇಕಾಗುತ್ತದೆ ಎಂದರು.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಆಪರೇಶನ್ ಹಸ್ತ ಮುಂದುವರಿಸಿದ್ದಾರೆ ಮತ್ತು ಚುನಾವಣೆ ಹತ್ತಿರವಾಗುತ್ತಿರುವಂತೆ ಅದು ಮತ್ತಷ್ಟು ಜೋರು ಹಿಡಿದಿದೆ. ಗುರುವಾರ ತಡರಾತ್ರಿ ಚನ್ನಪಟ್ಟಣ, ಮಾಗಡಿ, ಆನೇಕಲ್ ಮತ್ತು ಕುಣಿಗಲ್ ಭಾಗಗಳ ಸುಮಾರು 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು (JDS workers) ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಅವರನ್ನ ಪಕ್ಷಕ್ಕೆ ಬರಮಾಡಿಕೊಂಡು ಮಾತಾಡಿದ ಶಿವಕುಮಾರ್ ಮೊನ್ನೆ ರಾತ್ರಿ ಸಹ 12-13 ಜೆಡಿಎಸ್ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾಗಿದ್ದು ಅವರೆಲ್ಲ ಹೆಚ್ ಡಿ ಕುಮಾರಸ್ವಾಮಿಯವರ (HJD Kumaraswamy) ಕಟ್ಟಾ ಬೆಂಬಲಿರಾಗಿದ್ದರು ಎಂದು ಹೇಳಿದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬೇರೆ ಬೇರೆ ಭಾಗಗಳ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಲೇ ಇದ್ದಾರೆ ಇದುವರೆಗೆ ಏನಿಲ್ಲವೆಂದರೂ ಸುಮಾರು 5,000 ಮುಖಂಡರು ಪಕ್ಷಕ್ಕೆ ಬಂದಿದ್ದಾರೆ ಎಂದು ಶಿವಕುಮಾರ್ ಹೇಳಿದರು. ಹೊಸದಾಗಿ ಪಕ್ಷ ಸೇರಿದವರಿಗೆ ಸಮಯ ವ್ಯರ್ಥ ಮಾಡದಂತೆ ತಿಳಿಸಿರುವುದಾಗಿ ಹೇಳಿದ ಶಿವಕುಮಾರ್ ಅವರ ಭವಿಷ್ಯ ಮುಖ್ಯ ಮತ್ತು ಅದರ ಬಗ್ಗೆಯೂ ತಮ್ಮ ಪಕ್ಷ ಯೋಚಿಸಬೇಕಾಗುತ್ತದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕುಮಾರಸ್ವಾಮಿ ಕೇಂದ್ರದಲ್ಲಿ ಕೃಷಿ ಸಚಿವನಾಗುವ ಕನಸು ಕಾಣೋದ್ರಲ್ಲಿ ತಪ್ಪೇನೂ ಇಲ್ಲ: ಡಿಕೆ ಶಿವಕುಮಾರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.