AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಗತ್ಯ ಮಾತ್ನಾಡದಂತೆ ಕಾಂಗ್ರೆಸ್‌ ನಾಯಕರಿಗೆ ಸೂಚನೆ, BL ಸಂತೋಷ್​ ಏನ್​ ರಾಜಕಾರಣ ಮಾಡ್ತಾರೋ ಮಾಡ್ಲಿ’

[lazy-load-videos-and-sticky-control id=”_u3miouDNWM”] ಬೆಂಗಳೂರು: ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಕೇಸ್ ಕುರಿತು KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಶಾಸಕರಾಗಲಿ, ಯಾರೇ ಆಗಲಿ ದಾಳಿ ಮಾಡಬಾರದು. ನಾನು ಘಟನೆಯನ್ನ ಖಂಡಿಸುತ್ತೇನೆ. ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಯಾರೂ ಮಾಡಬಾರದು. ಪ್ರಚೋದನಕಾರಿ ಪೋಸ್ಟ್ ಹಾಕುವುದು ಕೂಡ ಸರಿಯಲ್ಲ. ಅದು ತಪ್ಪು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಜೊತೆಗೆ, ಬೆಂಗಳೂರು‌ ಶಾಸಕರ ಸಭೆ ಕರೆದಿದ್ದೇನೆ. ಈ ಕುರಿತು ಚರ್ಚೆ ಮಾಡ್ತೇವೆ. ಗಲಾಟೆ ಪ್ರಕರಣದ ಹಿಂದೆ ವ್ಯವಸ್ಥಿತವಾದ ಸಂಚು […]

‘ಅನಗತ್ಯ ಮಾತ್ನಾಡದಂತೆ ಕಾಂಗ್ರೆಸ್‌ ನಾಯಕರಿಗೆ ಸೂಚನೆ, BL ಸಂತೋಷ್​ ಏನ್​ ರಾಜಕಾರಣ ಮಾಡ್ತಾರೋ ಮಾಡ್ಲಿ’
KUSHAL V
| Edited By: |

Updated on:Aug 12, 2020 | 12:32 PM

Share

[lazy-load-videos-and-sticky-control id=”_u3miouDNWM”]

ಬೆಂಗಳೂರು: ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಕೇಸ್ ಕುರಿತು KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಶಾಸಕರಾಗಲಿ, ಯಾರೇ ಆಗಲಿ ದಾಳಿ ಮಾಡಬಾರದು. ನಾನು ಘಟನೆಯನ್ನ ಖಂಡಿಸುತ್ತೇನೆ. ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಯಾರೂ ಮಾಡಬಾರದು. ಪ್ರಚೋದನಕಾರಿ ಪೋಸ್ಟ್ ಹಾಕುವುದು ಕೂಡ ಸರಿಯಲ್ಲ. ಅದು ತಪ್ಪು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಜೊತೆಗೆ, ಬೆಂಗಳೂರು‌ ಶಾಸಕರ ಸಭೆ ಕರೆದಿದ್ದೇನೆ. ಈ ಕುರಿತು ಚರ್ಚೆ ಮಾಡ್ತೇವೆ. ಗಲಾಟೆ ಪ್ರಕರಣದ ಹಿಂದೆ ವ್ಯವಸ್ಥಿತವಾದ ಸಂಚು ಇದೆ. ಬಿಜೆಪಿ ನಾಯಕ BL ಸಂತೋಷ್​ ಏನು ರಾಜಕಾರಣ ಮಾಡ್ತಾರೋ ಮಾಡಲಿ. ರಾತ್ರಿಯಿಂದ ನಾನು ಎಲ್ಲ ರೀತಿ ಮಾಹಿತಿ ಪಡೆದಿದ್ದೇನೆ. ನಮ್ಮ ಶಾಸಕರೂ ಸ್ಥಳಕ್ಕೆ ಹೋಗಿ ಶಾಂತಿ ನೆಲೆಸುವಂತೆ ಪ್ರಯತ್ನ ಮಾಡಿದ್ದಾರೆ ಎಂದು KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಜೊತೆಗೆ, ಸಿ.ಟಿ ರವಿ ಅಥವಾ ಇನ್ಯಾರದ್ದೋ ಹೇಳಿಕೆ ಬಗ್ಗೆ ನಾನು ರಿಯಾಕ್ಟ್ ಮಾಡಲ್ಲ ಎಂದು ಹೇಳಿದ್ದಾರೆ.

ಇದಲ್ಲದೆ, ಡಿ.ಕೆ.ಶಿವಕುಮಾರ್ ತಮ್ಮ ಕಾಂಗ್ರೆಸ್‌ ನಾಯಕರಿಗೆ ಅನಗತ್ಯವಾಗಿ ಮಾತನಾಡದಂತೆ ಸೂಚಿಸಿದ್ದಾರೆ. ಹಿರಿಯ ನಾಯಕರಷ್ಟೆ ಮಾತನಾಡಬೇಕು. ಜೊತೆಗೆ, ಬಿಜೆಪಿ ನಾಯಕರ ಪ್ರತಿ ಹೇಳಿಕೆಗೂ ಪ್ರತಿಕ್ರಿಯೆ ನೀಡದಂತೆ ಸೂಚನೆ ನೀಡಿದ್ದಾರೆ. ಗಲಭೆಗೆ ಯಾರನ್ನೂ ಸಮರ್ಥಿಸಿವುದು ಬೇಡ. ತಪ್ಪನ್ನ ತಪ್ಪು ಎಂದು ನೇರವಾಗಿ ಹೇಳಿ ಎಂದು ಹಿರಿಯ ನಾಯಕರಿಗೆ ಡಿ.ಕೆ.ಶಿವಕುಮಾರ್ ತಾಕೀತು ಮಾಡಿದ್ದಾರೆ.

Published On - 10:53 am, Wed, 12 August 20

ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ