Dhoti comment: ಹೆಚ್​ಡಿ ಕುಮಾರಸ್ವಾಮಿ ಪಂಚೆ ಟೀಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಂಚ್​ ಉತ್ತರ ಇಲ್ಲಿದೆ!

ಸಾಧು ಶ್ರೀನಾಥ್​

Updated on: Jan 08, 2022 | 8:49 AM

ಮೇಕೆದಾಟು ಯೋಜನೆಗೆ ಕಾಂಗ್ರೆಸ್​ ಪಕ್ಷದ ಕೊಡುಗೆ ಏನೂ ಇಲ್ಲ ಎಂದು ಕುಮಾರಸ್ವಾಮಿಯವರು ಮಾಡಿರುವ ಸರಣಿ ಟ್ವೀಟ್​​ಗಳನ್ನು ಮಾಧ್ಯಮದವರು ಶುಕ್ರವಾರದಂದು ಬೆಂಗಳೂರಲ್ಲಿ ಡಿ.ಕೆ, ಶಿವಕುಮಾರ್​ ಅವರ ಗಮನಕ್ಕೆ ತಂದಾಗ, ಇತ್ತೀಚಿಗೆ ಕುಮಾರಸ್ವಾಮಿಯವರ ಕಾಮೆಂಟ್​ಗಳಿಗೆ ಪ್ರತಿಕ್ರಿಯಿಸುವುದನ್ನು ನಿಲ್ಲಿಸಿ, ಅವರು ದೊಡ್ಡವರು, ಅವರು ಹೇಳಿದ್ದೇ ಸರಿ ಎಂದಿದ್ದಾರೆ.

ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್​ ಪಕ್ಷದ ಕೊಡುಗೆ ಏನೂ ಇಲ್ಲ ಎಂದು ಕುಮಾರಸ್ವಾಮಿಯವರು ಮಾಡಿರುವ ಸರಣಿ ಟ್ವೀಟ್​​ಗಳನ್ನು ಮಾಧ್ಯಮದವರು ಶುಕ್ರವಾರದಂದು ಬೆಂಗಳೂರಲ್ಲಿ ಡಿ.ಕೆ, ಶಿವಕುಮಾರ್​ ಅವರ ಗಮನಕ್ಕೆ ತಂದಾಗ, ಇತ್ತೀಚಿಗೆ ಕುಮಾರಸ್ವಾಮಿಯವರ ಕಾಮೆಂಟ್​ಗಳಿಗೆ ಪ್ರತಿಕ್ರಿಯಿಸುವುದನ್ನು ನಿಲ್ಲಿಸಿ, ಅವರು ದೊಡ್ಡವರು, ಅವರು ಹೇಳಿದ್ದೇ ಸರಿ ಎಂದು ಪ್ರತಿಕ್ರಿಯಿಸಲು ಆರಂಭಿಸಿದ್ದಾರೆ.

ರಾಜ್ಯ ಸರ್ಕಾರ ಕೂಡಲೇ ಕರ್ಫ್ಯೂ ವಾಪಸ್​ ಪಡೆಯಬೇಕು. ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯ. ಕೊರೊನಾ ಪಾಸಿಟಿವಿಟಿ ಬಗ್ಗೆ ಕೂಡ ತನಿಖೆ ಮಾಡಬೇಕು. ಈ ಬಗ್ಗೆ ಒಂದು ಆಯೋಗ ರಚನೆ ಆಗಬೇಕು. ಪಾಸಿಟಿವಿಟಿ ಪಟ್ಟಿಯೇ ಬೋಗಸ್ ಎಂದೂ ಶಿವಕುಮಾರ್ ಆರೋಪಿಸಿದ್ದಾರೆ.

ಈ ಮಧ್ಯೆ ಹೆಚ್​ಡಿ ಕುಮಾರಸ್ವಾಮಿ ಪಂಚೆ (Dhoti) ಟೀಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಏನು ಹೇಳಿದರು ಎಂಬುದಕ್ಕೆ ಈ ವಿಡಿಯೋದಲ್ಲಿದೆ ಉತ್ತರ. DKS Exclusive Interview : ಡಿಕೆಶಿ ಪಾದಯಾತ್ರೆಗೆ ಪ್ರೀ ಶೂಟಿಂಗ್ ಮಾಡವ್ರೆ ಎಂದಿರೋ HDK |Tv9kannada

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು