Karnataka Assembly Polls: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಮೊದಲು ತಾಯಿ ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ Edited By:

Updated on: May 11, 2023 | 5:12 PM

ಇನ್ನೆರಡು ದಿನಗಳಲ್ಲಿ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಅದಕ್ಕೂ ಮೊದಲು ಡಿಕೆ ಸಹೋದರರು ತಾಯಿಯ ಆಶೀರ್ವಾದ ಪಡೆದರು.

ರಾಮನಗರ: ವಿಧಾನಸಭಾ ಚುನಾವಣೆ ನಿಮಿತ್ತ ಕಳೆದ ಎರಡು-ಮೂರು ತಿಂಗಳುಗಳಿಂದ ರಾಜ್ಯದೆಲ್ಲೆಡೆ ಸುತ್ತಾಡಿದ ಡಿಕೆ ಶಿವಕುಮಾರ್ (DK Shivakumar) ನಿನ್ನೆ ನಡೆದ ಮತದಾನ ಮತ್ತು ಮತಗಟ್ಟೆ ಸಮೀಕ್ಷೆಗಳ ವರದಿಗಳು ಹೊರಬಿದ್ದ ಬಳಿಕ ನಿರಾಳರಾಗಿದ್ದಾರೆ. ಗುರುವಾರ ಬೆಳಗ್ಗೆ ಅವರು ತಮ್ಮ ಸಹೋದರ ಡಿಕೆ ಸುರೇಶ್ (DK Suresh) ಜೊತೆ ಜಿಲ್ಲೆಯ ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ವಾಸವಾಗಿರುವ ಅವರ ತಾಯಿ ಗೌರಮ್ಮರನ್ನು (Gowramma) ಭೇಟಿಯಾದರು. ಇನ್ನೆರಡು ದಿನಗಳಲ್ಲಿ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಅದಕ್ಕೂ ಮೊದಲು ಡಿಕೆ ಸಹೋದರರು ತಾಯಿಯ ಆಶೀರ್ವಾದ ಪಡೆದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 11, 2023 12:40 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.